ಮಧುಗಿರಿ :
ಕನ್ನಡ ಪರ ಹೋರಾಟಗಾರರು ಕರೆ ನೀಡಿರುವ ರಾಜ್ಯದ ಬಂದ್ ಗೆ ಮಧುಗಿರಿ ಪಟ್ಟಣದಲ್ಲಿ ನೀರಸ ಪತ್ರಿಕ್ರಿಯೆ ವ್ಯಕ್ತವಾಗಿದೆ.
ರಾಜ್ಯದಿಂದ 3000 ಕ್ಯೂಸೆಕ್ ಕಾವೇರಿ ನೀರನ್ನು ಪ್ರತಿ ದಿನ ತಮಿಳುನಾಡಿಗೆ ಹರಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿರುವ ಹಿನ್ನೆಲೆಯಲ್ಲಿ ಕನ್ನಡ ಪರ ಹೋರಾಟಗಾರರು ಬಂದ್ ಕರೆ ನೀಡಿರುವ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಖಾಸಗಿ ಬಸ್ ಗಳ ಸಂಚಾರ ಹೊರತು ಪಡಿಸಿ ಉಳಿದಂತೆ ಎಲ್ಲಾ ಅಂಗಡಿ ಮುಂಗಟ್ಟುಗಳು ತೆರೆದಿದ್ದು ಸಾರ್ವಜನಿಕರ ಓಡಾಟ ಎಂದಿನಂತೆ ಇದ್ದಿದ್ದು ಕಂಡು ಬಂದಿದೆ.
ಶಾಲೆ ಕಾಲೇಜುಗಳು ಎಂದಿನಂತೆ ತೆರೆದಿದ್ದು ಇಂದು ಫ್ರೌಡಶಾಲೆಗಳಲ್ಲಿ ಎಸ್ 1 ಹಂತದ ಗಣಿತ ವಿಷಯದ ಪರೀಕ್ಷೆ ಇರುವುದರಿಂದ ವಿದ್ಯಾರ್ಥಿಗಳು ಶಾಲೆಗಳಿಗೆ ಹಾಜರಾಗಿದ್ದು ಕಂಡು ಬಂದಿದ್ದು ಯಾವುದೇ ಅಹಿತಕರ ಘಟನೆಗಳು ಸಂಬಂಧಿಸಿದಂತೆ ಒಂದು ಡಿ ಎ ಆರ್ ಘಟಕ ಹಾಗೂ ಸ್ಥಳೀಯ ಪೋಲಿಸ್ ರು ಮತ್ತು ಗೃಹರಕ್ಷಕ ದಳದ ಸಿಬ್ಬಂದಿಗಳನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2023/09/karnataka-bundh.gif)