ಗುಡಿಬಂಡೆ:
ಬಾಗೇಪಲ್ಲಿಯಿಂದ ಗುಡಿಬಂಡೆಗೆ ಬರುತ್ತಿದ್ದ ಸಾರಿಗೆ ಬಸ್ ಒಂದು ಪಟ್ಟಣದ ಸಮೀಪದ ಉಪ್ಪಾರಹಳ್ಳಿ ಗ್ರಾಮದ ಆಂಜನೇಯಸ್ವಾಮಿ ದೇವಾಲಯದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಜಮೀನುಗಳಿಗೆ ನುಗ್ಗಿದ್ದು, ಬಸ್ ಲ್ಲಿದ್ದ ಮಗು ಸೇರಿದಂತೆ 13 ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಬಸ್ ಚಾಲಕ ಅತಿ ವೇಗವಾಗಿ ಚಾಲನೆ ಮಾಡಿಕೊಂಡು ಬಂದಿರುವುದೇ ಅಪಘಾತಕ್ಕೆ ಕಾರಣ ಎಂದು ಆರೋಪಿಸಲಾಗಿದೆ. ಬಸ್ ಮುಂಭಾಗದ ಎರಡು ಚಕ್ರಗಳು ಕಿತ್ತು ಬಂದಿದ್ದು, ಬಸ್ ನಲ್ಲಿದ್ದ 13 ಕ್ಕೂ ಹೆಚ್ಚು ಪ್ರಯಾಣಿಕರಿಗೆ ತೀವ್ರತರವಾದ ಗಾಯಗಳಾದರೆ, ನಿರ್ವಾಹಕ ಸಹಿತ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ
ಗಾಯಾಳುಗಳನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ, ಜಿಲ್ಲಾ ಡಿ.ವೈ.ಎಸ್ಪಿ ಶಿವಕುಮಾರ್, ಪೊಲೀಸ್ ಇನ್ಸ್ಪೆಕ್ಟರ್ ನಯಾಜ್ ಬೇಗ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಸ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2023/11/WhatsApp-Image-2023-11-04-at-10.52.29_c90b0755.jpg)