ಕರ್ನಾಟಕದ ಅತಿ ಉದ್ದದ ಕೇಬಲ್‌ ಬ್ರಿಡ್ಜ್‌ನ ವಿಶೇಷತೆಗಳೇನು……?

ಶಿವಮೊಗ್ಗ:

    ಜಿಲ್ಲೆಯ ಸಾಗರ ತಾಲೂಕಿನಲ್ಲಿ ಶರಾವತಿ ನದಿ ಹಿನ್ನೀರಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಅಂಬಾರಗೋಡ್ಲು – ಕಳಸವಳ್ಳಿ ಸೇತುವೆಯನ್ನು ಕೇಂದ್ರ ಸಚಿವೆ ನಿತಿನ್‌ ಗಡ್ಕರಿ ಅವರು ಲೋಕಾರ್ಪಣೆ ಮಾಡಿದ್ದಾರೆ. ಸುಮಾರು 2.1 ಕಿಲೋಮೀಟರ್​​ ಉದ್ದವಿರುವ ಈ ಸೇತುವೆ ದೇಶದ ಎರಡನೇ ಅತಿದೊಡ್ಡ ಕೇಬಲ್ ಆಧಾರಿತ ಸೇತುವೆ ಆಗಿದೆ. ಈ ಸೇತುವೆಯು ಸಾಗರ ಮತ್ತು ಸಿಗಂದೂರು ನಡುವಿನ ಪ್ರಯಾಣದ ಅವಧಿಯನ್ನು 2 ಗಂಟೆಗಳಷ್ಟು ಕಡಿಮೆ ಮಾಡಲಿದೆ. ಜತೆಗೆ ಪ್ರವಾಸೋದ್ಯಮ ಹಾಗೂ ವಾಣಿಜ್ಯ ಚಟುವಟಿಗಳಿಗೆ ಉತ್ತೇಜನ ನೀಡಲಿದೆ.

   ಲಿಂಗನಮಕ್ಕಿ ಜಲಾಶಯದ ನಿರ್ಮಾಣದಿಂದ 1960ರ ದಶಕದಲ್ಲಿ ಸಾಗರ ತಾಲೂಕಿನ ಹಲವು ಗ್ರಾಮಗಳು ಶರಾವತಿ ಹಿನ್ನೀರಿನಿಂದ ಸಂಪರ್ಕ ಕಳೆದುಕೊಂಡಿದ್ದವು. ಈ ಸೇತುವೆಯ ಬೇಡಿಕೆ ಆರಂಭದಿಂದಲೂ ಇದ್ದರೂ, 2018ರಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಶಂಕುಸ್ಥಾಪನೆ ನೆರವೇರಿಸಿದ್ದರು. ಇದೀಗ ಉದ್ಘಾಟನೆ ಮಾಡಿದ್ದಾರೆ. ಸಿಗಂದೂರು ಸೇತುವೆಯ ವಿಶೇಷತೆಗಳ ಬಗ್ಗೆ ವಿವರ ಇಲ್ಲಿದೆ.

    2.1 ಕಿ.ಮೀ ಉದ್ದ ಮತ್ತು 16 ಮೀಟರ್ ಅಗಲವಿರುವ ಈ ಸೇತುವೆಯು 740 ಮೀಟರ್ ಕೇಬಲ್ ಆಧಾರಿತ ಸೇತುವೆ ಹೊಂದಿದೆ. ಇದು ಎಕ್ಸ್ಟ್ರಾಡೋಸ್ಟ್ ಬ್ಯಾಲೆನ್ಸ್ ಕ್ಯಾಂಟಿಲಿವರ್ ವಿನ್ಯಾಸವನ್ನು ಒಳಗೊಂಡಿದ್ದು, ಸಾಂಪ್ರದಾಯಿಕ ಸೇತುವೆಗಳಿಗಿಂತ ಹೆಚ್ಚಿನ ಸ್ಥಿರತೆಯನ್ನು ಒದಗಿಸುತ್ತದೆ.

   473 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದ್ದು, ಇದರಲ್ಲಿ 378.3 ಕೋಟಿ ರೂ.ಗಳನ್ನು ಸೇತುವೆಯ ನಿರ್ಮಾಣಕ್ಕೆ ಮಾತ್ರ ಬಳಸಲಾಗಿದೆ.

    17 ಪಿಯರ್‌ಗಳು ಮತ್ತು ಎರಡು ಅಬಟ್‌ಮೆಂಟ್‌ಗಳನ್ನು ಬಳಸಿಕೊಂಡು ನಿರ್ಮಿಸಲಾಗಿದ್ದು, ಸಾಮಾನ್ಯ ಸೇತುವೆಗೆ 100 ಪಿಯರ್‌ಗಳ ಅಗತ್ಯವಿರುತ್ತದೆ. ಕೇಬಲ್‌ಗಳು ಡೆಕ್‌ ಲಂಬ ಭಾರವನ್ನು ಗೋಪುರಗಳಿಗೆ ವರ್ಗಾಯಿಸುತ್ತವೆ.ಶರಾವತಿ ನದಿಯ ಭೋರ್ಗರೆವ ಪ್ರವಾಹವನ್ನು ತಡೆದುಕೊಳ್ಳಲು ಸೇತುವೆ ವಿನ್ಯಾಸಗೊಳಿಸಲಾಗಿದ್ದು, 100 ವರ್ಷಗಳ ಆಯುಷ್ಯವನ್ನು ಖಾತ್ರಿಪಡಿಸಲು ಲೋಡ್ ಟೆಸ್ಟಿಂಗ್‌ನಲ್ಲಿ 22 ಮಿಮೀ ವಿಚಲನದೊಂದಿಗೆ 100 ಟನ್ ಭಾರವನ್ನು ಯಶಸ್ವಿಯಾಗಿ ತಡೆದುಕೊಂಡಿದೆ.

Recent Articles

spot_img

Related Stories

Share via
Copy link