80 ಅಡಿ ಕಂದಕಕ್ಕೆ ಕಾರು ಪಲ್ಟಿ : ನಾಲ್ವರ ದುರ್ಮರಣ!!!

ಚಿಕ್ಕಮಗಳೂರು: 

      80 ಅಡಿಯ ಕಂದಕಕ್ಕೆ ಕಾರೊಂದು ಉರುಳಿ ಬಿದ್ದು ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಳಸ ಸಮೀಪದ ಹಿರೇಬೈಲು ಗ್ರಾಮದ ಬಳಿ ನಡೆದಿದೆ.

     ವಿಶ್ವನಾಥ್ (55) ಹಾಗೂ ಪುಪ್ಪಾವತಿ (48), ರಾಹುಲ್ ರೈ (58), ಮಮತಾ (51) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು  ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮೂಲದವರು ಎಂದು ಗುರುತಿಸಲಾಗಿದೆ.

     ಯಕ್ಷಗಾನವನ್ನು ನೋಡಲು ಬರುವಾಗ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು ಅವರನ್ನು ಕಳಸ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

      ಇನ್ನು ಸ್ಥಳಕ್ಕೆ ಕಳಸ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ. 

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

Recent Articles

spot_img

Related Stories

Share via
Copy link
Powered by Social Snap