ದೆಹಲಿ :6 ಮಂದಿ ವಿರುದ್ಧ ಸಿಬಿಐ ತನಿಖೆಗೆ ಅನುಮೋದನೆ

ನವದೆಹಲಿ: 

        ಗುಪ್ತಚರ ಮಾಹಿತಿ ಸಂಗ್ರಹ ಪ್ರಕರಣದಲ್ಲಿ ಆರೋಪಿ ಎಂದಾಗಿರುವ  ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಐಎಎಸ್ ಅಧಿಕಾರಿ ಸೇರಿದಂತೆ ಇತರ ಆರು ಮಂದಿ ವಿರುದ್ಧ ಪ್ರಕರಣ ದಾಖಲಿಸಲು ಮತ್ತು ಅವರನ್ನು ತನಿಖೆಗೊಳಪಡಿಸಲು ಕೇಂದ್ರ ಗೃಹ ಸಚಿವಾಲಯವು ಕೇಂದ್ರ ತನಿಖಾ ದಳಕ್ಕೆ (ಸಿಬಿಐ) ಅನುಮೋದನೆ ನೀಡಿದೆ. 

       ಈ ಹಿಂದೆ ಎಎಪಿ ಸರ್ಕಾರವು 2015 ರಲ್ಲಿ ಭ್ರಷ್ಟಾಚಾರ ಪರಿಶೀಲಿಸಲು FBU (Feedback Unit) ಘಟಕವನ್ನು ಸ್ಥಾಪಿಸಿದ್ದರು. ಇದೇ ಘಟಕವನ್ನು ಮುಂದಿಟ್ಟುಕೊಂಡು ಬೇಹುಗಾರಿಕೆ ಮತ್ತು ರಾಜಕೀಯ ಗುಪ್ತಚರ ಸಂಗ್ರಹಣೆಗಾಗಿ ಬಳಸಲಾಗಿದೆ ಎಂದು ಆರೋಪಿಸಲಾಗಿತ್ತು. ಈ ಯೋಜನೆಗೆ ಮೀಸಲಿಟ್ಟ ಹಣದ ದುರುಪಯೋಗದ ಆರೋಪವೂ ದೆಹಲಿ ಸರ್ಕಾರ ಮತ್ತು ಸಚಿವ ಸಿಸೋಡಿಯಾ ಮೇಲಿದೆ.

      ಈ ಕುರಿತು ಫೆಬ್ರವರಿ 17 ರಂದು ಬರೆದ ಪತ್ರದಲ್ಲಿ, ಗೃಹ ವ್ಯವಹಾರಗಳ ಸಚಿವಾಲಯವು ಭ್ರಷ್ಟಾಚಾರ ತಡೆ ಕಾಯ್ದೆ, 1988 ರ ಸೆಕ್ಷನ್ 17 ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲು ಮತ್ತು ಈ ವಿಷಯದ ತನಿಖೆಯ ಪ್ರಕ್ರಿಯೆಯನ್ನು ಪ್ರಾರಂಭಿಸಲು ಭಾರತದ ಪ್ರಧಾನ ತನಿಖಾ ಸಂಸ್ಥೆಗೆ ತನ್ನ ಒಪ್ಪಿಗೆಯನ್ನು ನೀಡಿತು. ಈ ತಿಂಗಳ ಆರಂಭದಲ್ಲಿ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಸಿಸೋಡಿಯಾ ಮತ್ತು ಇತರರ ವಿರುದ್ಧ ಕಾನೂನುಬಾಹಿರ ಕಾನೂನು ಕ್ರಮದ ಆರೋಪಗಳಿರುವ ಕಾರಣ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲು ಸಿಬಿಐಗೆ ಒಪ್ಪಿಗೆ ಕೋರಿದ ನಂತರ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡಲಾಯಿತು. ರಾಜಕೀಯ ಪ್ರತಿಸ್ಪರ್ಧಿಗಳು ಮತ್ತು ಸರ್ಕಾರಿ ಅಧಿಕಾರಿಗಳ ಮೇಲೆ ಕಣ್ಣಿಡಲು ಬೇಹುಗಾರಿಕಾ ಘಟಕಗಳ ಸ್ಥಾಪನೆ ಮತ್ತು ಕಾರ್ಯಾಚರಣೆ ಮಾಡಲಾಗುತ್ತಿದೆ ಎಂದು ಆರೋಪಿಸಲಾಗಿತ್ತು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap