ನವದೆಹಲಿ:
ದೇಶದಲ್ಲಿ ಭಾರೀ ಸದ್ದು ಮಾಡಿರುವ ಐಫೋನ್ ಹ್ಯಾಕಿಂಗ್ ಪ್ರಯತ್ನ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ, ಆಯಪಲ್ ಕಂಪನಿಗೆ ಗುರುವಾರ ನೋಟಿಸ್ ಕಳುಹಿಸಿದ್ದು, ಸರ್ಕಾರಿ ಪ್ರಾಯೋಜಿತ ದಾಳಿ ನಡೆದಿದೆ ಎನ್ನುವುದಕ್ಕೆ ಸಾಕ್ಷ್ಯಾಧಾರವನ್ನು ಒದಗಿಸುವಂತೆ ಕೇಳಿದೆ.
ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಗುರುವಾರ ಆಯಪಲ್ ಕಂಪನಿಗೆ ನೋಟಿಸ್ ನೀಡಿದ್ದು, ತಕ್ಷಣ ಪ್ರತಿಕ್ರಿಯೆ ನೀಡುವಂತೆ ನಿರ್ದೇಶನ ನೀಡಿದೆ. ಸರ್ಕಾರಿ ಪ್ರಾಯೋಜಿತ ದಾಳಿಯ ಬಗ್ಗೆ ಅಂತಿಮ ನಿರ್ಣಯವನ್ನು ತಿಳಿಸುವಂತೆ ಆಯಪಲ್ ಕಂಪನಿಯ ಅಧಿಕಾರಿಗಳಿಗೆ ಸಚಿವಾಲಯ ತಿಳಿಸಿದೆ.
ಅಂದಹಾಗೆ ಈ ವಿವಾದ ಶುರುವಾಗಿದ್ದೇ ಅ.31ರಂದು. ಇಂಡಿಯಾ ಒಕ್ಕೂಟದ ಸದಸ್ಯರುಗಳಾದ ಕಾಂಗ್ರೆಸ್ ಸಂಸದ ಶಶಿ ತರೂರ್, ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ, ಪ್ರಿಯಾಂಕಾ ಚೆತುರ್ವೇದಿ , ಅಸಾದುದ್ದೀನ್ ಒವೈಸಿ , ರಾಘವ್ ಚಡ್ಡಾ ಮತ್ತು ಐಎನ್ಸಿ ವಕ್ತಾರರಾದ ಪವನ್ ಖೇರಾ ಮತ್ತು ಸುಪ್ರಿಯಾ ಶ್ರೀನಾಥೆ ಅವರುಗಳಿಗೆ ಸೋಮವಾರ ರಾತ್ರಿ ಆಯಪಲ್ ಕಂಪನಿಯಿಂದ ಎಚ್ಚರಿಕೆ ಸಂದೇಹಗಳು ಹೋಗಿದ್ದು, ಇದು ಸರ್ಕಾರಿ ಪ್ರಾಯೋಜಕತ್ವದ ಹ್ಯಾಕಿಂಗ್ ಯತ್ನ ಎಂದು ಆರೋಪಿಸಲಾಗಿದೆ. ಆದರೆ, ಈ ಆರೋಪವನ್ನು ಕೇಂದ್ರ ಸರ್ಕಾರ ನಯವಾಗಿ ತಿರಸ್ಕರಿಸಿದೆ.
ಈ ಬಗ್ಗೆ ಮಾಹಿತಿ ತಂತ್ರಜ್ಞಾನ ಸಚಿವಾಲಯದ ಸಚಿವ ಅಶ್ವಿನಿ ವೈಷ್ಣವ್ ಅವರು ಪ್ರತಿಕ್ರಿಯೆ ನೀಡಿದ್ದು, ಫೋನ್ ಹ್ಯಾಕಿಂಗ್ ಬಗ್ಗೆ ಯಾರೆಲ್ಲ ರಾಜಕಾರಣಿಗಳು ಧ್ವನಿ ಎತ್ತಿದ್ದಾರೋ ಅದನ್ನು ಪರಿಗಣಿಸಿ, ಪರಿಶೀಲಿಸುವುದಾಗಿ ತಿಳಿಸಿದ್ದಾರೆ.
APPLE ಕಂಪನಿಯು ಸಂಸತ್ತಿನ ಉಭಯ ಸದನಗಳ ಸದಸ್ಯರಿಗೆ ಎಸ್ಎಂಎಸ್ ಮತ್ತು ಇಮೇಲ್ ಮೂಲಕ ಎಚ್ಚರಿಕೆಗಳನ್ನು ಕಳುಹಿಸಿದೆ ಮತ್ತು ಇತ್ತೀಚಿನ iOS 17.1 ಅಪ್ಡೇಟ್ಗೆ ಮೊಬೈಲ್ ಅನ್ನು ಅಪ್ಗ್ರೇಡ್ ಮಾಡಲು ಒತ್ತಾಯಿಸಿದೆ. ಏಕೆಂದರೆ, ಅಪ್ಗ್ರೇಡ್ ಮಾಡದಿದ್ದರೆ, ಅದು ಭದ್ರತಾ ಲೋಪದೋಷಗಳನ್ನು ಪ್ಲಗ್ ಮಾಡುವ ಹಲವಾರು ಸೆಕ್ಯುರಿಟಿ ಪ್ಯಾಚ್ಗಳನ್ನು ಹೊಂದಿದ್ದು, ಐಫೋನ್ ಹ್ಯಾಕ್ಗೆ ಅನುಮತಿಸಬಹುದು ಎಂಬುದು ಎಚ್ಚರಿಕೆ ಸಂದೇಶದಲ್ಲಿದೆ.
ಯಾವುದೇ ನಿರ್ದಿಷ್ಟ ಸರ್ಕಾರ ಪ್ರಾಯೋಜಿತ ಹ್ಯಾಕಿಂಗ್ ಬೆದರಿಕೆ ನೋಟಿಫಿಕೇಶನ್ಗಳ ಬಗ್ಗೆ ಆಯಪಲ್ ಕಂಪನಿ ಆರೋಪ ಮಾಡುವುದಿಲ್ಲ. ಸರ್ಕಾರ ಪ್ರಾಯೋಜಿತ ಹ್ಯಾಕರ್ಗಳು ಉತ್ತಮ ಹಣ ಮತ್ತು ಅತ್ಯಾಧುನಿಕರಾಗಿರುತ್ತಾರೆ. ಈ ಹ್ಯಾಕರ್ಗಳ ದಾಳಿಗಳು ಕಾಲಾನಂತರದಲ್ಲಿ ವಿಕಸನಗೊಳ್ಳುತ್ತವೆ. ಇಂತಹ ಹ್ಯಾಕರ್ಗಳನ್ನು ಪತ್ತೆಹಚ್ಚುವುದು ಸಾಮಾನ್ಯವಾಗಿ ಅಪೂರ್ಣ ಮತ್ತು ಅಪೂರ್ಣವಾಗಿರುವ ಬೆದರಿಕೆ ಗುಪ್ತಚರ ಸಂಕೇತಗಳ ಮೇಲೆ ಅವಲಂಬಿತವಾಗಿದೆ.
ಕೆಲವು ಆಯಪಲ್ ಬೆದರಿಕೆ ನೋಟಿಫಿಕೇಶನ್ಗಳು ತಪ್ಪು ಎಚ್ಚರಿಕೆ ಸಂದೇಶಗಳಾಗಿರಬಹುದು ಅಥವಾ ಕೆಲವು ದಾಳಿಗಳು ಪತ್ತೆಯಾಗದಿರುವ ಸಾಧ್ಯತೆಯೂ ಇದೆ. ಬೆದರಿಕೆ ನೋಟಿಫಿಕೇಶನ್ಗಳು ಬರಲು ಕಾರಣವೇನು ಎಂಬುದರ ಕುರಿತು ಮಾಹಿತಿಯನ್ನು ಒದಗಿಸಲು ನಮಗೆ ಸಾಧ್ಯವಾಗುತ್ತಿಲ್ಲ, ಏಕೆಂದರೆ ಭವಿಷ್ಯದಲ್ಲಿ ಪತ್ತೆಹಚ್ಚುವಿಕೆಯನ್ನು ತಪ್ಪಿಸುವ ಸಲುವಾಗಿ ಸರ್ಕಾರಿ ಪ್ರಾಯೋಜಿತ ಹ್ಯಾಕರ್ಗಳು ತಮ್ಮ ನಡವಳಿಕೆಯನ್ನು ಹೊಂದಿಕೊಳ್ಳಲು ಮಾಹಿತಿ ಸಹಾಯ ಮಾಡಬಹುದು ಎಂದು ಆಯಪಲ್ ಕಂಪನಿ ಹೇಳಿದೆ.
APPLE ಸುಮಾರು 150 ರಾಷ್ಟ್ರಗಳಿಗೆ ಹ್ಯಾಕ್ ಆಗುವ ಅಪಾಯದಲ್ಲಿರುವ ಜನರಿಗೆ ಇದೇ ರೀತಿಯ ಎಚ್ಚರಿಕೆ ಸಂದೇಶಗಳನ್ನು ಕಳುಹಿಸಿದೆ ಎಂಬುದನ್ನು ಇಲ್ಲಿ ಗಮನಿಸಬೇಕು. 2021ರಲ್ಲಿ ಪೆಗಾಸೆಸ್ ಸ್ಪೈವೇರ್ ಹಗರಣದ ನಂತರ ಆಯಪಲ್ ಕಂಪನಿಯು ತನ್ನ ಫೀಚರ್ನಲ್ಲಿ ಲಾಕ್ಡೌನ್ ಮೋಡ್ ಪರಿಚಯಿಸಿತ್ತು. ಈ ಫೀಚರ್ ಹ್ಯಾಕರ್ಗಳಿಗೆ ಫೋಟೋಗಳನ್ನು ಹೊರತುಪಡಿಸಿ ಬೇರೆ ಯಾವುದೇ ಅಟ್ಯಾಚ್ಮೆಂಟ್ಗಳನ್ನು ತೆಗೆಯದಂತೆ ನೋಡಿಕೊಳ್ಳುತ್ತದೆ ಎಂದು ಹೇಳಲಾಗಿದೆ.
ಸದ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಹ್ಯಾಕಿಂಗ್ ಸುದ್ದಿ ಸದ್ದು ಮಾಡುತ್ತಿದ್ದು, ಇದು ಮುಂದೆ ಯಾವ ಸ್ವರೂಪ ಪಡೆದುಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2023/11/apple.jpg)