ವಿಜಯಪುರ:
ಕೇಂದ್ರ ಸಚಿವರಾದ ಸಾಧ್ವಿ ನಿರಂಜನಾ ಜ್ಯೋತಿ ಅವರು ಪ್ರಯಾಣಿಸುತ್ತಿದ್ದ ಇನೋವಾ ಕಾರಿಗೆ ಟ್ರಕ್ ವೊಂದು ಡಿಕ್ಕಿ ಹೊಡೆದ ಘಟನೆ ವರದಿಯಾಗಿದೆ , ವಿಜಯಪುರ ನಗರದ ಹೊರವಲಯದ ಜುಮನಾಳ ಗ್ರಾಮದ ಸಮೀಪ ಅಪಘಾತಕ್ಕಿಡಾಗಿದ್ದು,. ಸಚಿವೆ ಹಾಗೂ ಕಾರು ಚಾಲಕ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಈ ಅಪಘಾತ ಸಂಭವಿಸಿದ್ದು, ಕೇಂದ್ರ ಸಚಿವರ ಇನ್ನೋವಾ ಕಾರು ಟ್ರಕ್ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಸಚಿವರು ಮತ್ತು ಅವರ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಥಮ ಚಿಕಿತ್ಸೆ ನೀಡಲಾಗಿದೆ.ಟ್ರಕ್ ಚಾಲಕ ಪಾನಮತ್ತನಾಗಿದ್ದ ಎನ್ನಲಾಗಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ.
ವಿಜಯಪುರದಲ್ಲಿ ಆಯೋಜಿಸಿದ್ದ ಮಹಿಳಾ ಮಹಿಳಾ ಸಮಾವೇಶದಲ್ಲಿ ಭಾಗವಹಿಸಲು ಸಾಧ್ವಿ ನಿರಂಜನಾ ಜ್ಯೋತಿ ಅವರು ಆಗಮಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2023/03/Untitled-12-3.jpg)