ಪರಿಷತ್‌ ವಿರೋಧ ಪಕ್ಷದ ನಾಯಕರಾಗಿ ಛಲವಾದಿ ನಾರಾಯಣಸ್ವಾಮಿ ಆಯ್ಕೆ

ಬೆಂಗಳೂರು:

   ವಿಧಾನಸಭೆಯಲ್ಲಿ ಪ್ರಮುಖ ವಿರೋಧ ಪಕ್ಷವಾಗಿರುವ ಬಿಜೆಪಿಯು ಪರಿಷತ್ತಿನಲ್ಲಿ ವಿರೋಧ ಪಕ್ಷದ ನಾಯಕರನ್ನಾಗಿ ಎಸ್ ಸಿ ಸಮುದಾಯದ ಛಲವಾದಿ ನಾರಾಯಣಸ್ವಾಮಿ ಅವರನ್ನು ನೇಮಕ ಮಾಡಿದೆ.

    ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಟ್ವೀಟ್ ಮಾಡಿ ಛಲವಾದಿ ನಾರಾಯಾಣಸ್ವಾಮಿಗೆ ಅಭಿನಂದನೆ ತಿಳಿಸಿದ್ದಾರೆ. ಪರಿಶಿಷ್ಟ ಸಮುದಾಯಗಳ ಹಾಗೂ ಸಾಂವಿಧಾನಿಕ ಹಕ್ಕುಗಳ ಪರ ನಿರಂತರ ದನಿಯಾಗಿ ನಿಂತು ಹೋರಾಟ ನಡೆಸಿಕೊಂಡು ಬಂದ ಹಿನ್ನಲೆಯ ಛಲವಾದಿ ನಾರಾಯಣ ಸ್ವಾಮಿಯವರ ನಾಯಕತ್ವ ಹಾಗೂ ಪಕ್ಷ ಬದ್ಧತೆಯನ್ನು ಗುರುತಿಸಿ ವಿಧಾನ ಪರಿಷತ್ ಪ್ರವೇಶಕ್ಕೆ ಅವಕಾಶ ಕಲ್ಪಿಸಿಕೊಟ್ಟಿದ್ದ ಬಿಜೆಪಿ ವರಿಷ್ಟರು ಇದೀಗ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡುವ ಮೂಲಕ ‘ಸಾಮಾಜಿಕ ನ್ಯಾಯ’ ನಮ್ಮ ಪಕ್ಷದ ಆದ್ಯತೆ ಎಂಬ ಸಂದೇಶ ರವಾನಿಸಿದ್ದಾರೆ ಎಂದು ಟ್ವೀಟಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ