ಚಾಮರಾಜನಗರ :
ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಅಕ್ಸಿಜನ್ ಸಿಗದೇ 20ಕ್ಕೂ ಅಧಿಕ ಮಂದಿ ಕರೊನ ಸೋಂಕಿತರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಈ ಘಟನೆಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಸಿಎಂ ಯಡಿಯೂರಪ್ಪ, ಅಲ್ಲಿನ ವಾಸ್ತವ ಏನೆಂದು ವರದಿ ಸಲ್ಲಿಸುವಂತೆ ಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ.ಕೆ. ಸುಧಾಕರ್ಗೆ ಸೂಚಿಸಿದ್ದಾರೆ. ಸಿಎಂ ಸೂಚನೆ ಮೇರೆಗೆ ಚಾಮರಾಜನಗರ, ಮೈಸೂರು ಮತ್ತು ಮಂಡ್ಯದತ್ತ ಸುಧಾಕರ್ ಪ್ರಯಾಣ ಬೆಳೆಸಿದ್ದಾರೆ.
ಕರೊನ ಸೋಂಕಿತರಿಗಾಗಿ ಚಿಕಿತ್ಸೆ ನೀಡಲಾಗುತ್ತಿದ್ದ ಕೊಠಡಿಗೆ ತಲುಪುತ್ತಿದ್ದ ಅಕ್ಸಿಜನ್ ಏಕಾಏಕಿ ಸ್ಥಗಿತಗೊಂಡು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಮೈಸೂರಿನಿಂದ ಚಾಮರಾಜನಗರ 50 ಸಿಲಿಂಡರ್ ಆಕ್ಸಿಜನ್ ಬರಬೇಕಿತ್ತು. ಆದರೆ ಮಧ್ಯರಾತ್ರಿ 2 ಗಂಟೆಯಾದರೂ ಪೂರೈಕೆಯಾಗದ ಕಾರಣ ಈ ದುರಂತ ಸಂಭವಿಸಿದೆ ಎಂದು ಚಾ.ನಗರ ಜಿಲ್ಲಾಧಿಕಾರಿ ಎಂಆರ್ ವಿ ರವಿ ಹೇಳಿದ್ದಾರೆ.
Karnataka | 24 patients, including COVID-19 patients, died at Chamarajanagar District Hospital due to oxygen shortage & others reasons in last 24 hours. We are waiting for the death audit report: District Incharge Minister Suresh Kumar
(Visuals from outside the hospital) pic.twitter.com/8wEOkEEBvm
— ANI (@ANI) May 3, 2021
ಸದ್ಯ ಘಟನ ಸ್ಥಳಕ್ಕೆ ಜಿಲ್ಲಾಧಿಕಾರಿ ಎಂಆರ್ ವಿ ರವಿ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಮೈಸೂರಿನಿಂದ ಚಾಮರಾಜನಗರ 50 ಸಿಲಿಂಡರ್ ಆಕ್ಸಿಜನ್ ಬರಬೇಕಿತ್ತು. ಆದರೆ ಮಧ್ಯರಾತ್ರಿ 2 ಗಂಟೆಯಾದರೂ ಪೂರೈಕೆಯಾಗದ ಕಾರಣ ಈ ದುರಂತ ಸಂಭವಿಸಿದೆ ಎಂದು ಹೇಳಿದ್ದಾರೆ.
ತನಿಖೆ ಬಳಿಕ ಮಾತ್ರ ಈ ಬಗ್ಗೆ ಸತ್ಯ ತಿಳಿದುಬರಲಿದೆ. ಈ ನಡುವೆ ಆಸ್ಪತ್ರೆ ಮುಂದೆ ನೂರಾರು ಮಂದೆ ನೆರೆದಿದ್ದು, ಪರಿಸ್ಥಿತಿಯನ್ನು ನಿಭಾಯಿಸಲು ಪೊಲೀಸರು ಸ್ಥಳದಲ್ಲಿ ಬೀಡು ಬಿಟ್ಟಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ