ಪೊಲೀಸರ ಹೆಸರೇಳಿ ವೈದ್ಯನಿಗೆ 1.27 ಕೋಟಿ ಪಂಗನಾಮ ಹಾಕಿದ ಖದೀಮರು…!

ಚಿತ್ರದುರ್ಗ

     ಹಿರಿಯ ವೈದ್ಯರೊಬ್ಬರಿಗೆ ಸೈಬರ್ ಖದೀಮರು ಬರೋಬ್ಬರಿ 1.27 ಕೋಟಿ ರೂಪಾಯಿ ವಂಚನೆ   ಮಾಡಿರುವ ಘಟನೆ ಕೋಟೆನಾಡು ಚಿತ್ರದುರ್ಗದಲ್ಲಿ ನಡೆದಿದೆ. ನಿಮ್ಮ ಬ್ಯಾಂಕ್ ಖಾತೆ ಬಳಸಿ ಮನಿ ಲ್ಯಾಂಡರಿಂಗ್ (Money Laundering) ವಂಚನೆ ಆಗಿದೆ. ಖಾತೆಯ ಹಣದ ಆಡಿಟ್ ಮಾಡಬೇಕಿದೆ ಎಂದು ನಂಬಿಸಿ ವಾಟ್ಸಾಪ್​, ನಾರ್ಮಲ್ ಕಾಲ್ ಮಾಡಿ ಖದೀಮರು ವಂಚಿಸಿದ್ದಾರೆ. ಚಿತ್ರದುರ್ಗದ CEN ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಚಿತ್ರದುರ್ಗದ ಹಿರಿಯ ವೈದ್ಯ ಡಾ.ಶ್ರೀನಿವಾಸ್ ಶೆಟ್ಟಿ ಎಂಬುವವರಿಗೆ ಕರೆ ಮಾಡಿದ ಸೈಬರ್ ಖದೀಮರು, ನಾವು TRAI & ಮುಂಬೈ ಪೊಲೀಸರೆಂದು ಪರಿಚಯ ಮಾಡಿಕೊಂಡಿದ್ದಾರೆ. ಬಳಿಕ ನಿಮ್ಮ ಬ್ಯಾಂಕ್ ಖಾತೆ ಬಳಸಿ ಮನಿ ಲ್ಯಾಂಡರಿಂಗ್ ವಂಚನೆ ಆಗಿದೆ. ಖಾತೆಯ ಹಣದ ಆಡಿಟ್ ಮಾಡಬೇಕಿದೆ ಎಂದು ಹೇಳಿ ನಂಬಿಸಿದ್ದಾರೆ. ನಂತರ ತಮ್ಮ ಖಾತೆಗೆ 1 ಕೋಟಿ 27ಲಕ್ಷ ಹಣ ವರ್ಗಾಯಿಸಿಕೊಂಡು ವಂಚನೆ ಮಾಡಿದ್ದಾರೆ. ಚಿತ್ರದುರ್ಗದ CEN ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.   

 

Recent Articles

spot_img

Related Stories

Share via
Copy link