ಚೆನ್ನೈ:
ಅಸನಿ ಚಂಡಮಾರುತದ ಪರಿಣಾಮ ಆಂಧ್ರ ಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಎರಡು ದಿನಗಳ ಕಾಲ ಮಳೆಯಾಗಲಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಚೆನ್ನೈನಿಂದ ಸಂಚಾರ ನಡೆಸುವ 10 ವಿಮಾನ ರದ್ದುಗೊಳಿಸಲಾಗಿದೆ.
ಹೈದರಾಬಾದ್, ವಿಶಾಖಪಟ್ಟಣಂ, ಜೈಪುರ, ಮುಂಬೈಗೆ ಸಂಚಾರ ನಡೆಸುವ 10 ವಿಮಾನಗಳನ್ನು ಚೆನ್ನೈ ವಿಮಾನ ನಿಲ್ದಾಣ ರದ್ದುಗೊಳಿಸಿದೆ. ಈ ಕುರಿತು ಪ್ರಯಾಣಿಕರಿಗೆ ಸಹ ಮಾಹಿತಿ ನೀಡಲಾಗಿದೆ.
ಮಂಗಳವಾರ ಮತ್ತು ಬುಧವಾರ ಅಸನಿ ಚಂಡಮಾರುತದ ಪ್ರಭಾವದಿಂದ ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಳೆಯಾಗಲಿದೆ. ಬುಧವಾರದ ನಂತರ ಚಂಡಮಾರುತದ ಅಬ್ಬರ ಕಡಿಮೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ