ಚಿಂತಾಮಣಿ :
ಸೇವಾ ನೇಮ ಜಾರಿ ಮಾಡಿ ಎಂದು ಅಂಗನವಾಡಿ ಕಾರ್ಯಕರ್ತರು ಚಿಂತಾಮಣಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು ಚಿಂತಾಮಣಿ ನಗರದ ಕೆಆರ್ ಬಡಾವಣೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಯದುರು ಅಂಗನವಾಡಿ ಕಾರ್ಯಕರ್ತರು ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.
ಕಾರ್ಮಿಕ ಕಾನೂನು ಬದಲಾವಣೆ ಸೇವಾ ಭದ್ರತೆ ಕನಿಷ್ಠ ವೇತನ ಜೊತೆಗೆ ಎಲ್ಲಾ ಕಾರ್ಮಿಕರಿಗೆ ಸೇವಾ ನಿಯಮ ಜಾರಿ ಮಾಡಬೇಕೆಂದು ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತರು ನಗರದ ಮಹಿಳಾ ಮತ್ತು ಮಕ್ಕಳ ಕಲ್ಯಾಣಕ್ಕೆ ಎದುರು ಸೋಮವಾರ ಪ್ರತಿಭಟನೆ ನಡೆಸಿದರು ಜಿಲ್ಲಾ ಅಂಗನವಾಡಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಲಕ್ಷ್ಮೀದೇವಮ್ಮ ಮಾತನಾಡಿ ಮಾರ್ಚ್ 28 ಮತ್ತು 29ರಂದು ಬೇಡಿಕೆಗಳ ಈಡೇರಿಕೆಗಾಗಿ ಹೋರಾಟಕ್ಕೆ ಕರೆನೀಡಲಾಗಿದೆ ಸೇವಾಭದ್ರತೆ ಕನಿಷ್ಠ ವೇತನ ಎಲ್ಲಾ ಕಾರ್ಮಿಕರಿಗೂ ಸೇವಾ ನಿಯಮ ಜಾರಿ ಮಾಡಬೇಕು ಸ್ಥಳೀಯವಾಗಿ ಆಯಾ ಕೇಂದ್ರಗಳಲ್ಲಿ ಮನವಿ ಸಲ್ಲಿಸಿ ಪ್ರತಿಭಟನೆ ನಡೆಸಿ ಬೇಡಿಕೆಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ಸಲ್ಲಿಸಲಾಗಿದೆ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2022/03/IMG_20220328_195529.gif)