ಜು.27ಕ್ಕೆ ಕಾಂಗ್ರೆಸ್‌ ಸಿಎಲ್‌ ಪಿ ಸಭೆ….!

ಬೆಂಗಳೂರು:

     ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಕೆಲವೇ ತಿಂಗಳುಗಳು ಕಳೆದಿದ್ದು, ಈ ನಡುವಲ್ಲೇ ಪಕ್ಷದಲ್ಲಿ ಅಸಮಾಧಾನ ಭುಗಿಲೆದ್ದಿದೆ. ಕಾಂಗ್ರೆಸ್ ಪಕ್ಷದ ಸಚಿವರು ಹಾಗೂ​ ಶಾಸಕರ ನಡುವೆ ಮುಸುಕಿನ ಗುದ್ದಾಟ ಶುರುವಾಗಿದೆ. ಸಚಿವರು ದುರ್ನಡತೆ ತೋರುತ್ತಿದ್ದು, ಬುದ್ದಿ ಹೇಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಾಸಕರು ದೂರು ನೀಡಿದ್ದಾರೆ. ಅಲ್ಲದೆ, ಕೂಡಲೇ ಶಾಸಕಾಂಗ ಸಭೆ ಕರೆಯುವಂತೆಯೂ ಆಗ್ರಹಿಸಿದ್ದಾರೆ.

    ಕಳೆದ ಶಾಸಕಾಂಗ ಸಭೆಯಲ್ಲೇ ಅಸಮಾಧಾನ ಸ್ಫೋಟಗೊಂಡಿತ್ತು. ಸಚಿವರು ವರ್ಗಾವಣೆ ದಂಧೆಯಲ್ಲಿ ಮುಳುಗಿದ್ದಾರೆ ಎಂದು ಶಾಸಕಾಂಗ ಸಭೆಯಲ್ಲೇ ಬೇಸರ ಹೊರಹಾಕಿದ್ದ ಶಾಸಕರು, ಇದೀಗ ಸಚಿವರ ವರ್ತನೆ ಬದಲಾಗದ ಹಿನ್ನೆಲೆಯಲ್ಲಿ ನೇರವಾಗಿ ಸಿಎಂಗೆ ದೂರು ನೀಡಿದ್ದಾರೆ.

     ಬಸವರಾಜ ರಾಯರೆಡ್ಡಿ ನೇತೃತ್ವದಲ್ಲಿ ಪತ್ರ ಬರೆದು ಶಾಸಕಾಂಗ ಸಭೆಗೆ ಆಗ್ರಹಿಸಲಾಗಿದೆ. 20ಕ್ಕೂ ಹೆಚ್ಚು ಹಿರಿಯ ಶಾಸಕರು ಪತ್ರಕ್ಕೆ ಸಹಿ ಹಾಕಿ ಮುಖ್ಯಮಂತ್ರಿಗಳಿಗೆ ರವಾನಿಸಿದ್ದಾರೆಂದು ತಿಳಿದುಬಂದಿದೆ.

     ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ವಿಧಾನ ಪರಿಷತ್‌ ಸಭಾನಾಯಕ ಎನ್‌.ಎಸ್‌. ಬೋಸರಾಜು, ಕೆಪಿಸಿಸಿ ಕಾರ್ಯಾಧ್ಯಕ್ಷರು ಸಭೆಯಲ್ಲಿ ಭಾಗವಹಿಸಲಿದ್ದಾರೆಂದು ತಿಳಿದುಬಂದಿದೆ.

ಶಾಸಕರ ಅಹವಾಲು ಜೊತೆಗೆ ಈಗಾಗಲೇ ಅನುಷ್ಠಾನಗೊಳಿಸಿರುವ ಗ್ಯಾರಂಟಿ ಯೋಜನೆಗಳ ಪರಾಮರ್ಶೆ, ನಿಗಮ– ಮಂಡಳಿ, ಪ್ರಾಧಿಕಾರಗಳಿಗೆ ನೇಮಕ, ವಿಧಾನಸಭೆ ಅಧಿವೇಶನದಲ್ಲಿ ನಡೆದ ಚರ್ಚೆ, ಪಕ್ಷದ ವಿರುದ್ಧದ ಬಿಜೆಪಿ– ಜೆಡಿಎಸ್‌ ಜಂಟಿ ಹೋರಾಟವನ್ನು ಎದುರಿಸಲು ರೂಪಿಸಬೇಕಾದ ಕಾರ್ಯತಂತ್ರ, ಲೋಕಸಭಾ ಚುನಾವಣೆ ದೃಷ್ಟಿಯಿಂದ ಪಕ್ಷ ಸಂಘಟನೆ ಮುಂತಾದ ವಿಷಯಗಳ ಕುರಿತಂತೆಯೂ ಸಭೆಯಲ್ಲಿ ಚರ್ಚೆಗೆ ನಡೆಯುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap