ಬೆಂಗಳೂರು :
ಕರ್ನಾಟಕ ಮುಖ್ಯಮಂತ್ರಿ ಸ್ಥಾನಕ್ಕೆ (Karnataka Chief Minister’s Post) ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (B.S. Yediyurappa) ಅವರು ರಾಜೀನಾಮೆ ಘೋಷಿಸಿದ್ದಾರೆ.
ಇಂದು ಬಿಜೆಪಿ ಸರ್ಕಾರದ ಸಾಧನಾ ಸಮಾವೇಶದಲ್ಲಿ ಗದ್ಗಿತರಾಗಿ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ, ಮಂಡ್ಯದ ಬೂಕನಕೆರೆಯಲ್ಲಿ ಹುಟ್ಟಿ ಶಿವಮೊಗ್ಗಕ್ಕೆ ಬಂದು ಶಿಕಾರಿಪುರದಲ್ಲಿ ಸಾಮಾನ್ಯ ಕಾರ್ಯಕರ್ತನಾಗಿ ನನ್ನ ಜೀವನವನ್ನು ಪ್ರಾರಂಭ ಮಾಡಿದೆ. ಆರ್ಎಸ್ಎಸ್ ಪ್ರಚಾರಕನಾಗಿ ಕೆಲಸ ಆರಂಭ ಮಾಡಿ, ಪುರಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದು, ಪುರಸಭೆ ಅಧ್ಯಕ್ಷನಾದೆ. ಈ ವೇಳೆ ನನ್ನ ಮೇಲೆ ಮಾರಣಾಂತಿಕ ಹಲ್ಲೆ ನಡೆಯಿತು. ನಾನು ಸತ್ತೇ ಹೋದೆ ಅಂದುಕೊಂಡಿದ್ದರು. ಆದರೆ, ಭಗವಂತನ ದಯೆಯಿಂದ ಬದುಕಿದೆ. ಇನ್ನು ಮುಂದೆ ಬದುಕಿದರೆ ನಾಡಿನ ಜನತೆಗಾಗಿ ಎಂದು ಅಂದೇ ತೀರ್ಮಾನಿಸಿದೆ. ಅಂದರಂತೆಯೇ ನಡೆದುಕೊಂಡೆ ಎಂಬ ತೃಪ್ತಿ ನನಗಿದೆ ಎಂದು ಹೇಳಿದರು.
ನಾನು ತೀರ್ಮಾನ ಮಾಡಿದ್ದೇನೆ. ಊಟ ಮಾಡಿದ ನಂತರ ರಾಜಭವನಕ್ಕೆ ಹೋಗಿ, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ತೀರ್ಮಾನ ಮಾಡಿದ್ದೇನೆ. 2 ವರ್ಷ ಮುಖ್ಯಮಂತ್ರಿ ಆಗಲು ಅವಕಾಶ ಮಾಡಿಕೊಟ್ಟ ಪ್ರಧಾನಿ ಮೋದಿ, ಅಮಿತ್ ಶಾ, ನಡ್ಡಾ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/04/BS-Yeddyurappa-1.gif)