ಬೆಂಗಳೂರು:
ಬೆಂಗಳೂರು ಕಲಾಸಿಪಾಳ್ಯದಲ್ಲಿ ನಿರ್ಮಿಸಿರುವ ನೂತನ ಬಸ್ ನಿಲ್ದಾಣವನ್ನು ಮುಖ್ಯಮಂತ್ರಿಗಳು ಉದ್ಘಾಟಿಸಿದರು.
ಸಾರ್ವಜನಿಕರ ಅನುಕೂಲಕ್ಕಾಗಿ ಬಿಎಂಟಿಸಿ ಸುಮಾರು 63.17 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಈ ಸುಸಜ್ಜಿತ ನಿಲ್ದಾಣವನ್ನು ಮುಖ್ಯಮಂತ್ರಿ ಸಾರ್ವಜನಿಕರ ಸೇವೆಗೆ ಸಮರ್ಪಿಸಿದರು. ಸಚಿವರಾದ ಆರ್. ಅಶೋಕ್, ಮುನಿರತ್ನ, ಬೈರತಿ ಬಸವರಾಜ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ನಂತರ ಮಾತನಾಡಿದ ಸಿಎಂ ಬೊಮ್ಮಾಯಿ, ಬಿಎಂಟಿಸಿ ನಗರದ ಜನರಿಗೆ ಉತ್ತಮ ಸೇವೆ ಸಲ್ಲಿಸುತ್ತಾ ಬಂದಿದೆ. ಮುಂಬರುವ ದಿನಗಳಲ್ಲಿ ಸಾರ್ವಜನಿಕ ಸಾರಿಗೆಯಲ್ಲಿ ಬಿಎಂಟಿಸಿ ಪ್ರಮುಖ ಪಾತ್ರ ವಹಿಸಲಿದ್ದು, ಬೆಂಗಳೂರಿನ ವಾಹನ ದಟ್ಟಣೆ ಕಡಿಮೆಯಾಗುತ್ತದೆ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2023/02/Untitled-4-25.jpg)