ಹೈದರಾಬಾದ್:
ಪೂರ್ವ ಲಡಾಖ್ ನಲ್ಲಿ ಚೀನಾ ಯೋಧರ ದಾಳಿಯಲ್ಲಿ ಹುತಾತ್ಮರಾದ ಕರ್ನಲ್ ಸಂತೋಷ್ ಬಾಬು ಕುಟುಂಬಕ್ಕೆ ರೂ.5 ಕೋಟಿ ಪರಿಹಾರ ನೀಡುವುದಾಗಿ ತೆಲಂಗಾಣ ಸರ್ಕಾರ ಘೋಷಿಸಿದೆ.
ಸಿಎಂ ಕೆ.ಚಂದ್ರಶೇಖರ್ ರಾವ್ ಕರ್ನಲ್ ಸಂತೋಷ್ ಬಾಬು ಅವರ ಮನೆಗೆ ಹೋಗಿ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ಜೊತೆಗೆ ಪರಿಹಾರವನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ. ಐದು ಕೋಟಿ ರೂ. ಪರಿಹಾರದ ಜೊತೆಗೆ ಕುಟುಂಬಕ್ಕೆ ನಿವಾಸ ಮತ್ತು ಪತ್ನಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ಘೋಷಣೆ ಮಾಡಿದರು. ಹುತಾತ್ಮರಾದ ಇತರ 19 ಸೈನಿಕರಿಗೆ ತಲಾ 10 ಲಕ್ಷ ರೂ.ಗಳನ್ನು ನೀಡಲಿದೆ ಎಂದು ಸಿಎಂ ರಾವ್ ಹೇಳಿದ್ದಾರೆ.
Telangana Govt would extend all help to the family of Col Santosh Kumar. Govt will give Rs 5 Crore cash to the family, a residential plot, Group 1 Job for his wife. For the other 19 Martyred army men in the same incident, state govt would give Rs 10 lakh each. pic.twitter.com/Y0Qadw26R4
— Telangana CMO (@TelanganaCMO) June 19, 2020
ಗಡಿಯಲ್ಲಿ ನಮ್ಮ ದೇಶವನ್ನು ಕಾಯುತ್ತಿರುವ ಯೋಧರೊಂದಿಗೆ ಇಡೀ ದೇಶ ನಿಲ್ಲಲಿದೆ. ಹುತಾತ್ಮ ಯೋಧರ ಕುಟುಂಬಸ್ಥರೊಂದಿಗೆ ನಾವು ನಿಲ್ಲಬೇಕು. ಇಡೀ ದೇಶ ನಿಮ್ಮೊಂದಿಗೆ ಎಂಬ ಧೈರ್ಯವನ್ನು ನಾವು ನೀಡಬೇಕು. ಅವರಿಗೆ ಬೆಂಬಲ ನೀಡಬೇಕು ಎಂದಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/06/Santhosh-babu.jpg)