ಮೈಸೂರು:
ಮಾಜಿ ಸಿಎಂ ಹೇಳಿಕೆ ವಿಚಾರವಾಗಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮಾತನಾಡಿದ ಹೆಚ್.ಡಿ. ಕುಮಾರಸ್ವಾಮಿ ಪ್ರತಿಕ್ರಯಿಸಿ ಮುಖ್ಯಮಂತ್ರಿ ಹುದ್ದೆ ಅದು ಜಾತಿಗಳಿಗೆ ಅತೀತವಾಗಿರಬೇಕು ಮತ್ತು ಪಾರದರ್ಶಕವಾಗಿರಬೇಕು ಆದ್ದರಿಂದ ಅದನ್ನು ಯಾವುದೇ ಒಂದು ಜಾತಿಗೆ ಸೀಮಿತ ಮಾಡಬೇಡಿ ಎಂದಿದ್ದಾರೆ.
ನಾಡಿನ ಹಿತದೃಷ್ಟಿ ಇಟ್ಟುಕೊಂಡು ಮುಖ್ಯಮಂತ್ರಿಯಾದವರು ಕೆಲಸ ಮಾಡಬೇಕು.ಕೇವಲ ಒಂದು ಸಮುದಾಯದ ಬಗ್ಗೆ ಮಾತನಾಡುವುದು ಸರಿಯಲ್ಲ. ಸಿದ್ದರಾಮಯ್ಯನವರು ಒಬ್ಬ ಅನುಭವಿ ರಾಜಕಾರಣಿ , ಅಂತವರ ಬಾಯಲ್ಲಿ ಈ ಮಾತು ಯಾಕೆ ಬಂತೋ ಗೊತ್ತಿಲ್ಲ. ಯಾವ ಅರ್ಥದಲ್ಲಿ ಸಿದ್ದರಾಮಯ್ಯ ಅವರು ಹಾಗೆ ಹೇಳಿದ್ದಾರೋ ನನಗೂ ಗೊತ್ತಿಲ್ಲ.
ಬಿಜೆಪಿ ಪರ ಅಮಿತ್ ಶಾ ಹಾಗೂ ಕಾಂಗ್ರೆಸ್ ಪರ ಪ್ರಿಯಾಂಕಾ ಗಾಂಧಿ ಚುನಾವಣಾ ಪ್ರಚಾರ ವಿಚಾರವಾಗಿ ಮಾತನಾಡಿದ ಕುಮಾರಸ್ವಾಮಿ, ಅಮಿತ್ ಶಾ ಹಾಗೂ ಪ್ರಿಯಾಂಕಾ ಗಾಂಧಿ ಆಟ ರಾಜ್ಯದಲ್ಲಿ ನಡೆಯಲ್ಲ. ಕನ್ನಡ ನಾಡಿಗೆ ಅವರ ಕೊಡುಗೆ ಏನೂ ಇಲ್ಲ. ಅಮಿತ್ ಶಾಗೆ ರಾಜ್ಯದಲ್ಲಿ ಜನ ಬೆಂಬಲ ವ್ಯಕ್ತವಾಗುತ್ತಿಲ್ಲ. ಪರಚಾರ ಸಭೆಗಳಿಗೆ ಹೆಚ್ಚಿನ ಜನ ಇಲ್ಲ. ಸಿಎಂ ಬಸವರಾಜ್ ಬೊಮ್ಮಾಯಿ ಕೂಡ ಜನ ಬೆಂಬಲ ಕಳೆದುಕೊಂಡಿದ್ದಾರೆ. ಜೆಡಿಎಸ್ ಯಾರೊಂದಿಗೂ ಒಪ್ಪಂದ ಮಾಡಿಕೊಳ್ಳಲ್ಲ. ಸ್ವತಂತ್ರವಾಗಿ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
![](https://prajapragathi.com/wp-content/uploads/2023/04/kuma.jpg)