ತುಮಕೂರು : ನಾಳೆ ಜಿಲ್ಲೆಗೆ ಮುಖ್ಯಮಂತ್ರಿಗಳ ಭೇಟಿ

 ತುಮಕೂರು : 

      ಮಾನ್ಯ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರು ಮಾರ್ಚ್ 20ರಂದು ಜಿಲ್ಲೆಯ ತಿಪಟೂರು ತಾಲ್ಲೂಕಿನಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

      ಅಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಜಕ್ಕೂರು ಏರೋ ಡ್ರೋಂ(ವಿಟಿ-ಹೆಚ್‍ಕೆಬಿ/ಹೆಲಿಕಾಪ್ಟರ್ ಮೂಲಕ) ನಿರ್ಗಮಿಸಿ ಬೆಳಿಗ್ಗೆ 10-45 ಗಂಟೆಗೆ ತಿಪಟೂರು ತಾಲೂಕು ಕಲ್ಪತರು ಇಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಹೆಲಿಪ್ಯಾಡ್ ಮೂಲಕ ಆಗಮಿಸಿ, ಬೆಳಿಗ್ಗೆ 11 ಗಂಟೆಗೆ ತಿಪಟೂರು ತಾಲೂಕು ಕೆರೆಗೋಡಿ-ರಂಗಾಪುರದಲ್ಲಿ ಕೆರೆಗೋಡು-ರಂಗಾಪುರ ಸುಕ್ಷೇತ್ರ ಇವರ ವತಿಯಿಂದ ಆಯೋಜಿಸಿರುವ ಅತಿಥಿ ಗೃಹಗಳ ಸಮುಚ್ಚಯ ಉದ್ಘಾಟನೆ ನೆರವೇರಿಸಲಿದ್ದಾರೆ.

      ತದನಂತರ ಬೆಳಿಗ್ಗೆ 11-30 ಗಂಟೆಗೆ ತಿಪಟೂರು ತಾಲೂಕು ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮಿನಿ ವಿಧಾನ ಸೌಧ ಕಚೇರಿ, ನೂತನ ನಗರಸಭೆ ಕಟ್ಟಡ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿ ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 12-30 ಗಂಟೆಗೆ ಕಲ್ಪತರು ಇಂಜಿನಿಯರಿಂಗ್ ಕಾಲೇಜು ಆವರಣದಲ್ಲಿರುವ ಹೆಲಿಪ್ಯಾಡ್‍ನಿಂದ ಹೆಲಿಕಾಪ್ಟರ್ ಮೂಲಕ ತೆರಳುವರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap