ಚಿರತೆ ದಾಳಿ : ಆಸ್ಪತ್ರೆ ಸೇರಿದ ಗಾಯಾಳು ; ಹೆಚ್ಚಿದ ಆತಂಕ!

  ಚಿಕ್ಕನಾಯಕನಹಳ್ಳಿ :

      ತಾಲ್ಲೂಕಿನ ಶೆಟ್ಟಿಕೆರೆ ಹೋಬಳಿ ನಾಗೇನಹಳ್ಳಿ ಗ್ರಾಮದ ಗಂಗಾಧರ್ ಅವರ ಮೇಲೆ ಶನಿವಾರ ರಾತ್ರಿ ಚಿರತೆ ದಾಳಿ ಮಾಡಿದ ಪರಿಣಾಮ ಗಂಗಾಧರ್ ಗಾಯಗೊಂಡು ಬೆಂಗಳೂರು ಪೀಪಲ್ ಟ್ರೀ ಆಸ್ಪತ್ರೆಗೆ ದಾಖಲಾಗಿದ್ದಾರೆ.

      ಗಂಗಾಧರ್ ನಾಗೇನಹಳ್ಳಿಯ ತಮ್ಮ ತೋಟದ ಮನೆಯ ಹಿಂಭಾಗ ಮೊಬೈಲ್‍ನಲ್ಲಿ ಮಾತನಾಡುವಾಗ ಇದ್ದಕ್ಕಿದ್ದಂತೆ ಚಿರತೆ ದಾಳಿ ಮಾಡಿದ ಪರಿಣಾಮ ಕತ್ತು ಮತ್ತು ಕೈಗೆ ಗಾಯವಾಗಿ ಆಸ್ಪತ್ರೆಗೆ ಸೇರಿದ್ದಾರೆ.

     ಈಗಾಗಲೇ ಇಲ್ಲಿನ ಕೆರೆಗಳಲ್ಲಿ ಜಾಲಿಗಿಡಗಳು ಬೆಳೆದಿದ್ದು, 15 ದಿನಗಳ ಹಿಂದೆ ಅರಣ್ಯ ಇಲಾಖೆಯವರು ಚಿರತೆಯನ್ನು ಹಿಡಿದು ಕಾಡಿಗೆ ಬಿಟ್ಟು ಬಂದಿದ್ದಾರೆ. ಈ ಭಾಗದ ಕೆರೆಗಳಲ್ಲಿ 5 ರಿಂದ 6 ಚಿರತೆಗಳು ರಾತ್ರಿ ಹೊತ್ತಿನಲ್ಲಿ ಓಡಾಡುತ್ತಿವೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಇದರಿಂದ ಇಲ್ಲಿನ ತೋಟದ ಮನೆಯ ಜನರು ಹಾಗೂ ರಾತ್ರಿ ವೇಳೆಯಲ್ಲಿ ಬೇರೆ ಊರುಗಳಿಂದ ವಾಹನಗಳಲ್ಲಿ ಬರುವ ಜನರು ಸಂಚರಿಸಲು ಭಯ ಭೀತರಾಗಿದ್ದು, ಈ ಬಗ್ಗೆ ಅರಣ್ಯ ಅಧಿಕಾರಿಗಳು ಗಮನ ಹರಿಸುವಂತೆ ನಾಗೇನಹಳ್ಳಿ ಮತ್ತು ಸುತ್ತಮುತ್ತಲ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap