ಸಕಾಲಕ್ಕೆ ಸರಿಯಾಗಿ ಸದನಕ್ಕೆ ಸಚಿವರು ಆಗಮಿಸಬೇಕು :ಯು.ಟಿ.ಖಾದರ್

ಬೆಂಗಳೂರು

    ಸಕಾಲಕ್ಕೆ ಸರಿಯಾಗಿ ಸದನಕ್ಕೆ ಸಚಿವರು ಆಗಮಿಸಬೇಕು ಎಂದು ಸಭಾಧ್ಯಕ್ಷ ಯು.ಟಿ.ಖಾದರ್ ವಿಧಾನಸಭೆಗೆ ಸೂಚಿಸಿದರು.

     ಬೆಳಿಗ್ಗೆ ಸದನ ಸಮಾವೇಶಗೊಂಡಾಗ ಬಿಜೆಪಿ ಸದಸ್ಯರು ಸಚಿವರ ಹಾಜರಾತಿ ಇಲ್ಲ ಎಂದು ಆಕ್ಷೇಪಿಸಿದಾಗ ಸಭಾಧ್ಯಕ್ಷರು, ಪ್ರತಿ ದಿನವೂ ತಡ ಮಾಡುವುದು ಸರಿಯಲ್ಲ ಎಂದು ಸರ್ಕಾರಿ ಮುಖ್ಯ ಸಚೇತಕ ಅಶೋಕ ಪಟ್ಟಣ ಅವರಿಗೆ ಸೂಚನೆ ನೀಡಿದರು.ನೂತನ ಶಾಸಕರು 11 ಗಂಟೆಗೆ ಬಂದಿದ್ದರು. ಅದಕ್ಕೆ ಅವರನ್ನು ಅಭಿನಂದಿಸುವುದಾಗಿ ಹೇಳಿದರು. ಸಕಾಲಕ್ಕೆ ಸಚಿವರು ಬಾರದ ಹಿನ್ನೆಲೆಯಲ್ಲಿ ಸದನದ ಆರಂಭ ವಿಳಂಬವಾಯಿತು.

     ಮಂತ್ರಿಗಳು ಸಮಯ ಪಾಲನೆ ಮತ್ತು ಸಮಯದ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಭಾಧ್ಯಕ್ಷರು ಸೂಚಿಸಿದರು. ಇದಕ್ಕೂ ಮುನ್ನ ಮಾತನಾಡಿದ ಬಿಜೆಪಿ ಹಿರಿಯ ಶಾಸಕ ಆರ್. ಅಶೋಕ್, ಇಂಧನ ಸಚಿವ ಕೆ.ಜೆ.ಜಾರ್ಜ್ ಅವರನ್ನು ಹೊರತುಪಡಿಸಿದರೆ, ಬೇರೆ ಯಾವ ಸಚಿವರು ಇಲ್ಲ ಎಂದರು. ಇದಕ್ಕೆ ಬಿಜೆಪಿ ಹಿರಿಯ ಮುಖಂಡ ಬಸವರಾಜ ಬೊಮ್ಮಾಯಿ ಅವರು ದನಿಗೂಡಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap