ಚಿಕ್ಕಬಳ್ಳಾಪುರ:
ಸರ್ಕಾರಿ ವೈದ್ಯಕೀಯ ಕಾಲೇಜು ಕಟ್ಟಡ ಕಾಮಗಾರಿ ಶೀಘ್ರ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಆರ್.ಲತಾ ಸೂಚನೆ ನೀಡಿದರು.
ಚಿಕ್ಕಬಳ್ಳಾಪುರ ತಾಲ್ಲೂಕು ಅರೂರು ಗ್ರಾಮದ ಬಳಿ ವೈದ್ಯಕೀಯ ಕಾಲೇಜು ನಿರ್ಮಾಣ ಕಾಮಗಾರಿ ಪರಿಶೀಲಿಸಿ, ಅಭಿಯಂತರರೊAದಿಗೆ ಸಭೆ ನಡೆಸಿದ ಅವರು, ವೈದ್ಯಕೀಯ ಕಾಲೇಜು ನಿರ್ಮಾಣ ಕಾಮಗಾರಿ ನಿಗಧಿತ ಸಮಯಕ್ಕೆ ಪೂರ್ಣಗೊಳಿಸಬೇಕು. ಜಿಲ್ಲೆಯ ಜನತೆಯ ಸೇವೆಗೆ ಸಮರ್ಪಣೆ ಆಗಬೇಕಿದೆ. ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದು ಆದೇಶಿಸಿದರು. ಅಲ್ಲದೆ, ಕಾಮಗಾರಿಯ ಕುರಿತಂತೆ ಮಾಹಿತಿ ಪಡೆದರು.
ಮೆಡಿಕಲ್ ಕಾಲೇಜಿನ ಸಿಇಒ ಸಿದ್ಧೀಕ್, ತಹಸೀಲ್ದಾರ್ ಗಣಪತಿ ಶಾಸ್ತ್ರಿ, ಕಾರ್ಯಪಾಲಕ ಅಭಿಯಂತರ ಮಂಜಪ್ಪ, ಸಂತೋಷ್ ಕುಮಾರ್, ದೀಪಕ್ ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
