ಲಸಿಕೆ ಖರೀದಿಗೆ ರಾಜ್ಯ ಕಾಂಗ್ರೆಸ್​’ನಿಂದ 100 ಕೋಟಿ ರೂ!!

ಬೆಂಗಳೂರು : 

     ಕೊರೊನಾ ಲಸಿಕೆ ಖರೀದಿಸಲು ಕಾಂಗ್ರೆಸ್ ಶಾಸಕರು ಹಾಗೂ ಸಂಸದರು ತಮ್ಮ ಕ್ಷೇತ್ರದ ಅಭಿವೃದ್ಧಿ ನಿಧಿಯಿಂದ ತಲಾ 1 ಕೋಟಿ ರೂ.ನಂತೆ 100 ಕೋಟಿ ರೂ. ನೀಡಲು ತೀರ್ಮಾನಿಸಲಾಗಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಘೋಷಿಸಿದ್ದಾರೆ.

     ರಾಜ್ಯದಲ್ಲಿ ಕೊರೊನಾ ಲಸಿಕೆಯ ಅಭಾವದಿಂದಾಗಿ ವಿಪಕ್ಷಗಳು ರಾಜ್ಯ ಸರ್ಕಾರದ ಮೇಲೆ ಬೆರಳು ಮಾಡಿ ತೋರಿಸುವಂತಾಗಿದೆ. ಲಸಿಕೆಯ ಅಭಾವದಿಂದ ರಾಜ್ಯ ತತ್ತಿರಿಸಿರುವ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕ್ಷೇತ್ರದ ಅಭಿವೃದ್ಧಿ ನಿಧಿಗೆ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರಿಗೆ 2 ಕೋಟಿ ರೂ., ಸಂಸದರು ಹಾಗೂ ರಾಜ್ಯಸಭಾ ಸದಸ್ಯರಿಗೆ ತಲಾ 5 ಕೋಟಿ ರೂ. ನೀಡಲಾಗುತ್ತಿದೆ. ಇದರಲ್ಲಿ ಒಂದು ಕೋಟಿ ರೂ.ವನ್ನು ಕಾಂಗ್ರೆಸ್ ಶಾಸಕರು, ಸಂಸದರು ದೇಣಿಗೆಯಾಗಿ ರಾಜ್ಯ ಸರಕಾರಕ್ಕೆ ನೀಡಲು ತೀರ್ಮಾನಿಸಲಾಗಿದೆ ಎಂದರು.

      ರಾಜ್ಯದ ಪ್ರತಿಯೊಬ್ಬರಿಗೆ ಕೊರೊನಾ ಲಸಿಕೆ ದೊರೆಯುವಂತಾಗಬೇಕು ಎಂಬುದು ನಮ್ಮ ಬಯಕೆ. ಆದ್ದರಿಂದ ಕಾಂಗ್ರೆಸ್ ನಲ್ಲಿ 99 ಶಾಸಕರು ಇದ್ದಾರೆ. ಸಂಸದರು ಹಾಗೂ ರಾಜ್ಯಸಭಾ ಸದಸ್ಯರ ಮೊತ್ತವನ್ನೂ ಸೇರಿಸಿ 100 ಕೋಟಿ ರೂ. ನೀಡಲಾಗುವುದು. 100 ಕೋಟಿ ರೂ. ಮೊತ್ತವನ್ನು ಹೇಗೆ ಯಾರಿಗೆ ನೀಡಬೇಕು. ಲಸಿಕೆ ಖರೀದಿಗೆ ಹೇಗೆ ಬಳಸಬೇಕು ಎಂಬುದನ್ನು ನಾವು ಚಿಂತನೆ ನಡೆಸಿ ಮುಂದಿನ ದಿನಗಳಲ್ಲಿ ತಿಳಿಸುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು.

      ಪ್ರತಿಯೊಂದು ಶಾಸಕ ಹಾಗೂ ಸಂಸದರಿಗೆ ಕ್ಷೇತ್ರ ಅಭಿವೃದ್ಧಿಗೆಂದು 2 ಕೋಟಿ ರೂಪಾಯಿ ಹಣವನ್ನ ನೀಡಲಾಗುತ್ತದೆ. ಈ ಅಭಿವೃದ್ಧಿ ಹಣದಲ್ಲಿ ತಲಾ 1 ಕೋಟಿ ರೂಪಾಯಿಯನ್ನ ನೀಡಲು ರಾಜ್ಯ ಕಾಂಗ್ರೆಸ್​ ನಿರ್ಧರಿಸಿದೆ. ಕಾಂಗ್ರೆಸ್​ನ 95 ಶಾಸಕರು ಹಾಗೂ ಓರ್ವ ಸಂಸದರಿಂದ ತಲಾ 1 ಕೋಟಿ ರೂಪಾಯಿ ಹಣವನ್ನ ಕಾಂಗ್ರೆಸ್​ ಲಸಿಕೆ ಖರೀದಿಗೆ ನೀಡಲಿದೆ. ಇದರ ಜೊತೆಯಲ್ಲಿ ಸಂಸದ ಹಾಗೂ ರಾಜ್ಯ ಸಭಾ ಸದಸ್ಯರಿಂದ ತಲಾ 5 ಕೋಟಿ ಹಣವನ್ನೂ ಕಾಂಗ್ರೆಸ್​ ನೀಡಲಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap