ಬೆಂಗಳೂರು:
ಮಹಾಮಾರಿ ಕೊರೊನಾ ಗೆ ಮೃತಪಟ್ಟ ಮೂವರು ಪೊಲೀಸರ ಕುಟುಂಬಕ್ಕೆ 30 ಲಕ್ಷ ಪರಿಹಾರ ಘೋಷಣೆಯಾಗಿದ್ದು, ಇನ್ನೆರಡು ದಿನದಲ್ಲಿ ಬಿಡುಗಡೆಯಾಗಲಿದೆ ಎಂದು ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಇತ್ತೀಚೆಗೆ ಪೊಲೀಸ್ ರಲ್ಲಿ ಕೊರೊನಾ ಸೋಂಕು ಹೆಚ್ಚಳಗೊಂಡಿರುವ ಹಿನ್ನೆಲೆ ಯಲ್ಲಿ ಈ ಕುರಿತು ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸ್ ಇಲಾಖೆ ಫೋರ್ಫ್ರಂಟ್ನಲ್ಲಿದ್ದು, ಸಾವು, ಕಂಟೈನ್ಮೆಂಟ್ ಪ್ರದೇಶ ನಿಯಂತ್ರಣ ಮಾಡುವುದರ ಜೊತೆಗೆ ಜನರ ರಕ್ಷಣೆ ಮಾಡುವ ಹೊಣೆಯೂ ಪೊಲೀಸರ ಮೇಲಿದೆ. ಆದ್ದರಿಂದ ನಮ್ಮ ಸಿಬ್ಬಂದಿಯಲ್ಲಿ ಅಧಿಕ ಸೋಂಕು ಕಾಣಿಸಿಕೊಳ್ಳುತ್ತಿದೆ ಎಂದು ಅವರು ತಿಳಿಸಿದರು.
ಬೆಂಗಳೂರಿನಲ್ಲಿ ಪೊಲೀಸರಿಗಾಗಿಯೇ ಪ್ರತ್ಯೇಕ ಚಿಕಿತ್ಸೆ ನೀಡಲು ಐದು ಕೋವಿಡ್-19 ಆಸ್ಪತ್ರೆ ಗುರುತಿಸಲಾಗಿದೆ. ಸೋಂಕಿತರಿಗೆ ಉತ್ತಮ ಚಿಕಿತ್ಸೆ ದೊರಕಬೇಕು. ಅಲ್ಲದೇ, ತಪಾಸಣೆ ತಡವಾಗಬಾರದು ಎಂಬ ಉದ್ದೇಶದಿಂದ ಪೊಲೀಸರಿಗೆ ಹೆಚ್ಚು ತಪಾಸಣೆ ಸೆಂಟರ್ ಕೇಳಲಾಗಿದ್ದು, ಈ ಕುರಿತು ಎಸಿಎಸ್ ಅವರೊಂದಿಗೆ ಮಾತನಾಡಿದ್ದೇನೆ ಎಂದ ಅವರು ಪ್ರತ್ಯೇಕ ಆಸ್ಪತ್ರೆ, ಟೆಸ್ಟಿಂಗ್ ಘಟಕ ನೀಡಲಿದ್ದಾರೆ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/04/Police.gif)