ಚಾಮರಾಜನಗರ:
ಕೊರೊನಾದಿಂದ ಹೆದರಿ , ಹಾಗೂ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಒಂದೇ ಕುಟುಂಬದ ನಾಲ್ವರು ನೇಣಿಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಚಾಮರಾಜನಗರದ ಮೂಕಹಳ್ಳಿಯಲ್ಲಿ ನಡೆದಿದೆ.
ಗ್ರಾಮದ ಮಹದೇವಸ್ವಾಮಿ(47), ಅವರ ಪತ್ನಿ ಮಂಗಳಮ್ಮ(40), ಮಕ್ಕಳಾದ ಗೀತಾ(14) ಹಾಗೂ ಶೃತಿ(12) ಆತ್ಮಹತ್ಯೆಗೆ ಶರಣಾದ ದುರ್ದೈವಿಗಳು.
ಮಹಾದೇವಪ್ಪ ಅವರಿಗೆ ಕೊರೋನಾ ಪಾಸಿಟಿವ್ ಆಗಿ ಹೋಂ ಐಸೊಲೇಷನ್ ನಲ್ಲಿದ್ದರು. ಕೋವಿಡ್ ಸೋಂಕಿಗೆ ಹೆದರಿ ಇವರು ನೇಣಿಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ. ಈ ಕಟುಂಬವು ಆರ್ಥಿಕ ಸಂಕಷ್ಟದಿಂದ ಬಳಲುತ್ತಿತ್ತು ಎಂದು ತಿಳಿದುಬಂದಿದೆ.
20 ದಿನಗಳ ಹಿಂದೆ ಮಹದೇವಸ್ವಾಮಿ ಅವರಿಗೆ ಕೋವಿಡ್ ಸೋಂಕು ತಗುಲಿ ಗುಣಮುಖರಾಗಿದ್ದರು. ಇದೀಗ ಬೆಳಗ್ಗೆ ಇಡೀ ಕುಟುಂಬ ನೇಣಿಗೆ ಶರಣಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
