ಚೆಕ್‌ ಬೌನ್ಸ್‌ ಪ್ರಕರಣ : ಬಿಜೆಪಿ ಶಾಸಕ ದೋಷಿ ಎಂದ ಕೋರ್ಟ್

ಬೆಂಗಳೂರು: 

‌    ಎಂಟು ಚೆಕ್ ಬೌನ್ಸ್ ಪ್ರಕರಣಗಳಲ್ಲಿ ಮೂಡಿಗೆರೆಯ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರನ್ನು ಬೆಂಗಳೂರು ಸಿಟಿ ಕೋರ್ಟ್ ದೋಷಿ ಎಂದು ಘೋಷಿಸಿದೆ. ಶಾಸಕರು ದೂರುದಾರರಿಗೆ ಒಟ್ಟು 1.38 ಕೋಟಿ ಮೊತ್ತವನ್ನು ಪಾವತಿಸಬೇಕು, ತಪ್ಪಿದಲ್ಲಿ ಶಾಸಕರು ಪ್ರತಿ ಪ್ರಕರಣದಲ್ಲಿ ಆರು ತಿಂಗಳ ಜೈಲು ಶಿಕ್ಷೆಯನ್ನು ಅನುಭವಿಸಬೇಕು ಎಂದು ನ್ಯಾಯಾಲಯ ತೀರ್ಪು ನೀಡಿದೆ. 

    ನೆಗೋಷಿಯೇಬಲ್ ಇನ್‌ಸ್ಟ್ರುಮೆಂಟ್ಸ್ ಆಕ್ಟ್‌ನ ಸೆಕ್ಷನ್ 138 ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧಗಳಿಗಾಗಿ ನ್ಯಾಯಾಧೀಶ ಜೆ ಪ್ರೀತ್ ಅವರು ಕುಮಾರಸ್ವಾಮಿ ಅವರನ್ನು ದೋಷಿ ಎಂದು ಪ್ರಕಟಿಸಿ ತೀರ್ಪು ನೀಡಿದ್ದರು. 

    ದೋಷಿ ಶಾಸಕ ಕುಮಾರಸ್ವಾಮಿ ಕಾನೂನಿನ ಕುಣಿಕೆಯಿಂದ ತಪ್ಪಿಸಲು ತಮ್ಮದೇ ಆದ ರೀತಿಯಲ್ಲಿ ಸುಳ್ಳಿನ ಸರಮಾಲೆಯನ್ನೇ ಸೃಷ್ಟಿಸಿದ್ದಾರೆ. ದೂರುದಾರನ ಆರ್ಥಿಕ ಸಾಮರ್ಥ್ಯವನ್ನು ಪ್ರಶ್ನಿಸಿದ್ದು, ಚುನಾವಣಾ ಸಂದರ್ಭದಲ್ಲಿ ತನ್ನ ವಿರುದ್ಧ ದಾಖಲಾಗಿರುವ ಪ್ರಕರಣಗಳಿಂದ ಮುಕ್ತಿ ಪಡೆಯಲು ದೂರುದಾರರಿಗೆ 1.40 ಕೋಟಿ ರೂಪಾಯಿಗಳನ್ನು ನೀಡಿದ್ದೆ ಎಂದು ಹೇಳುವ ಮಟ್ಟಕ್ಕೆ ಹೋಗಿದ್ದಾರೆ. 

       ಯಾವುದೇ ಸಾಕ್ಷ್ಯಾಧಾರಗಳಿಲ್ಲದೆ ಇಷ್ಟೊಂದು ಹಣವನ್ನು ಕೊಡಲು ಸಾಧ್ಯವೇ ಎಂದು ನ್ಯಾಯಾಲಯದಲ್ಲಿ ಕುಮಾರಸ್ವಾಮಿ ಕೇಳಿದ್ದರು. ಇದು ಆರೋಪಿಗಳು ಕಾನೂನಿನ ಹಿಡಿತದಿಂದ ತಪ್ಪಿಸಿಕೊಳ್ಳಲು ಹೆಣೆಯುವ ಕಥೆ ಹೊರತು ಬೇರೇನೂ ಅಲ್ಲ ಎಂದು ನ್ಯಾಯಾಲಯದ ಗಮನಕ್ಕೆ ಬಂದಿದೆ. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link