2710ಕ್ಕೆ ಏರಿಕೆಯಾಯ್ತು ಕೊವಿಡ್ ಸೋಂಕು ….!

ನವದೆಹಲಿ: 

    ಭಾರತದಲ್ಲಿ ಕೊರೊನಾ ಮಹಾಮಾರಿ ವೇಗವಾಗಿ ಹಬ್ಬುತ್ತಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಸಕ್ರಿಯ ಕೋವಿಡ್ -19 ಪ್ರಕರಣಗಳು 2,710 ಕ್ಕೆ ಏರಿದ್ದು, ಹೆಚ್ಚಿನ ಸೋಂಕುಗಳು ಕೇರಳದಲ್ಲಿ ಪತ್ತೆಯಾಗಿದೆ. ಮೇ ಕೊನೆ ವಾರದಲ್ಲಿ ಒಂದೇ ಪತ್ತೆಯಾದ ಪ್ರಕರಣಗಳು 1000 ಕ್ಕೆ ಏರಿಕೆ ಕಂಡಿವೆ. ಅಂಕಿಅಂಶಗಳ ಪ್ರಕಾರ, ಕೇರಳದಲ್ಲಿ 1,147 ಪ್ರಕರಣಗಳು ದಾಖಲಾಗಿವೆ, ನಂತರ ಮಹಾರಾಷ್ಟ್ರ (424), ದೆಹಲಿ (294), ಮತ್ತು ಗುಜರಾತ್ (223) ಪ್ರಕರಣಗಳು ದಾಖಲಾಗಿವೆ. ಕರ್ನಾಟಕ ಮತ್ತು ತಮಿಳುನಾಡು ತಲಾ 148 ಪ್ರಕರಣಗಳನ್ನು ಪತ್ತೆಯಾಗಿವೆ.

   ಕಳೆದ 24 ಗಂಟೆಗಳಲ್ಲಿ ಏಳು ಸಾವುಗಳು ದಾಖಲಾಗಿದ್ದು, ಈ ವರ್ಷದ ಮೊದಲ ಐದು ತಿಂಗಳಲ್ಲಿ ಸಾವಿನ ಸಂಖ್ಯೆ 22 ಕ್ಕೆ ತಲುಪಿದೆ. ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರದಲ್ಲಿ ಎರಡು ಸಾವುಗಳು ಸಂಭವಿಸಿವೆ, ಆದರೆ ದೆಹಲಿ, ಗುಜರಾತ್, ಕರ್ನಾಟಕ, ಪಂಜಾಬ್ ಮತ್ತು ತಮಿಳುನಾಡುಗಳಲ್ಲಿ ತಲಾ ಒಂದು ಸಾವು ಸಂಭವಿಸಿದೆ.

   ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೊವಿಡ್-19 ಸೋಂಕು ಕಂಡುಬಂದಿದ್ದು, ಸೈಲೆಂಟ್​ ಆಗಿಯೇ ಮತ್ತೆ ರಾಜ್ಯದಲ್ಲಿ ತನ್ನ ಅಧಿಪತ್ಯ ಸಾಧಿಸುತ್ತಿದೆ. ನಿನ್ನೆ ಬೆಳಗ್ಗೆವರೆಗೂ ಒಟ್ಟು 100 ಮಂದಿಯಲ್ಲಿ ಕೋವಿಡ್ ಸೋಂಕು ದೃಢವಾಗಿತ್ತು. ಸಂಜೆಯೊಳಗೆ ಮತ್ತಷ್ಟು ಪ್ರಕರಣಗಳು ಪತ್ತೆಯಾಗಿವೆ. ಆದ್ರೆ ಕೊರೊನಾ ಮಹಾಮಾರಿಗೆ ಬೆಳಗಾವಿಯಲ್ಲಿ ಮೊದಲ ಬಲಿಯಾಗಿದೆ. ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 70 ವರ್ಷದ ರೋಗಿ ಮೃತಪಟ್ಟಿದ್ದಾರೆ. ಮೈಸೂರಲ್ಲಿ 63 ವರ್ಷ ಪುರುಷ ಕೊವಿಡ್​​​​ ಗೆ ಬಲಿಯಾಗಿದ್ದಾನೆ. ಈ ಮೂಲಕ ಹೆಮ್ಮಾರಿಗೆ ಬಲಿಯಾದವರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ. ಇನ್ನೊಂದೆಡೆ SARI ಗುಣಲಕ್ಷಣ ಹೊಂದಿರುವವರಿಗೆ ಕೊವಿಡ್ ಟೆಸ್ಟ್ ಕಡ್ಡಾಯಗೊಳಿಸಿ ಕೇಂದ್ರ ಆರೋಗ್ಯ ಇಲಾಖೆ ಮಹತ್ವದ ಸುತ್ತೋಲೆ ಹೊರಡಿಸಿದೆ. 

   ಕೊವಿಡ್ ಪ್ರಕರಣಗಳು ಹೆಚ್ಚಳ ಹಿನ್ನೆಲೆಯಲ್ಲಿ ಕೊವಿಡ್ ಪರೀಕ್ಷೆ ಕಡ್ಡಾಯಗೊಳಿಸಿ ಕೇಂದ್ರ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ. SARI ಗುಣಲಕ್ಷಣ ಹೊಂದಿರುವವರಿಗೆ ಕೊವಿಡ್ ಟೆಸ್ಟ್ ಕಡ್ಡಾಯಗೊಳಿಸಿದ್ದು, ಸ್ವ್ಯಾಬ್​​ ಪಡೆದ ದಿನವೇ ಪ್ರಯೋಗಾಲಯಕ್ಕೆ ಕಳಿಸಬೇಕು ಎಂದು ಸೂಚಿಸಿದೆ. ಜೂನ್ ತಿಂಗಳಲ್ಲಿ ಮಳೆಗಾಲದ ಜತೆಗೆ ವಾತಾವರಣದ ಉಷ್ಣಾಂಶ ಕೂಡ ತಗ್ಗಲ್ಲಿದ್ದು, ಸೋಂಕು ಮತ್ತಷ್ಟು ಹೆಚ್ಚಾಗೋ ಸಾಧ್ಯತೆಯಿದೆ.

Recent Articles

spot_img

Related Stories

Share via
Copy link