ಬೆಂಗಳೂರು:
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರಿಗೆ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ಅವರು ಕರ್ನಾಟಕದ ಬಾವುಟ ಹಾಗೂ ಹೂಗುಚ್ಛ ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು.HAL ಏರ್ಪೋರ್ಟ್ಗೆ ತೆರಳಿದ ಡಿಸಿಎಂ ಡಿ.ಕೆ ಶಿವಕುಮಾರ್ ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ 18 ವರ್ಷಗಳ ಕನಸನ್ನು 18ನೇ ಐಪಿಎಲ್ ಆವೃತ್ತಿಯಲ್ಲಿ ನನಸು ಮಾಡಿ, ನಮ್ಮ ಹುಡುಗ್ರು ತವರಿನ ಅಂಗಳಕ್ಕೆ ವಾಪಸ್ಸಾಗಿದ್ದಾರೆ. ಈ ಶುಭ ಸಂದರ್ಭದಲ್ಲಿ, ಇತಿಹಾಸ ಸೃಷ್ಟಿಸಿದ ಆರ್ಸಿಬಿ ತಂಡಕ್ಕೆ ಕರ್ನಾಟಕದ ಮಣ್ಣಿನಿಂದ ಪ್ರೀತಿಯ, ಭವ್ಯ ಸ್ವಾಗತ! ಎಂದಿದ್ದಾರೆ.
