ಬೆಂಗಳೂರು
ಕಳೆದ ಒಂದೂವರೆ ತಿಂಗಳಿಂದ ಕಾಂಗ್ರೆಸ್ ಪಾಳಯದಲ್ಲಿ ಸಂಚಲನ ಸೃಷ್ಟಿಸಿದ್ದ ಸಿಎಂ ಬದಲಾವಣೆ ಚರ್ಚೆಗೆ ಖುದ್ದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ತೆರೆ ಎಳೆದಿದ್ದಾರೆ. ಬ್ರೇಕ್ಫಾಸ್ಟ್ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಇನ್ನು ರಾಜಕಾರಣ ಇಲ್ಲ. ಏನಿದ್ರೂ ಜನರ ಸೇವೆ, ಆಡಳಿತ ಅಷ್ಟೇ. ಡಿನ್ನರ್ಗೆ ಸಿಎಂ ಕರೆಯುವ ದಿನಾಂಕ ನಿಮಗೆ ಹೇಳುತ್ತೇನೆ ಎಂದಿದ್ದಾರೆ.








