ಸಾಕು ನಾಯಿ ದಾಳಿ : ದರ್ಶನ್‌ ವಿರುದ್ದ ದೂರು

ಬೆಂಗಳೂರು:

     ಸಾಕು ನಾಯಿ ದಾಳಿ ಆರೋಪದ ಮೇರೆಗೆ ಖ್ಯಾತ ನಟ ತೂಗುದೀಪ ದರ್ಶನ್  ಅವರ ವಿರುದ್ಧ ಮಹಿಳೆಯೊಬ್ಬರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

    ನಟ ದರ್ಶನ್ ಮನೆಯ ಸಾಕು ನಾಯಿ, ಮಹಿಳೆಯೊಬ್ಬರಿಗೆ ಕಡಿದು ಗಾಯಗೊಳಿಸಿ ಆರೋಪದ ಮೇರೆಗೆ ಅಮಿತ್ ಜಿಂದಾಲ್ ಎಂಬ ಮಹಿಳೆಯು ದರ್ಶನ್ ಹಾಗೂ ಇತರರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.

    ದರ್ಶನ್​ರ ಆರ್​ಆರ್ ನಗರದ ನಿವಾಸದ ಬಳಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಘಟನೆ ನಡೆಯುವ ಮುನ್ನ ದರ್ಶನ್​ರ ಮನೆ ಸಿಬ್ಬಂದಿ ಮಹಿಳೆಯೊಂದಿಗೆ ವಾಗ್ವಾದ ಮಾಡಿದ್ದರು ಎಂದು ಮಹಿಳೆ ಆರೋಪಿಸಿದ್ದಾರೆ.ಮಹಿಳೆ ದೂರಿನಲ್ಲಿ ಹೇಳಿಕೊಂಡಿರುವಂತೆ ಆರ್​ ಆರ್​ ನಗರದಲ್ಲಿ ಆಸ್ಪತ್ರೆ ಕಾರ್ಯಕ್ರಮವೊಂದಕ್ಕೆ ಮಹಿಳೆ ಆಗಮಿಸಿದ್ದರು. ದರ್ಶನ್ ಮನೆಯ ಬಳಿ ಖಾಲಿ ಜಾಗದಲ್ಲಿ ತಮ್ಮ ಕಾರನ್ನು ಮಹಿಳೆ ನಿಲ್ಲಿಸಿದ್ದರು. ಕಾರ್ಯಕ್ರಮ ಮುಗಿಸಿ ಮರಳಿ ಬಂದಾಗ ಕಾರು ನಿಲ್ಲಿಸಿದ್ದ ಜಾಗದಲ್ಲಿ ಮೂರು ನಾಯಿಗಳು ಇದ್ದವಂತೆ. ದರ್ಶನ್​ರ ಮನೆ ಸಿಬ್ಬಂದಿಗೆ ನಾಯಿಗಳನ್ನು ಪಕ್ಕಕ್ಕೆ ಕರೆದುಕೊಳ್ಳುವಂತೆ ಮಹಿಳೆ ಕೇಳಿದ್ದಾರೆ.

    ಆಗ ವಾಗ್ವಾದ ನಡೆಸಿರುವ ದರ್ಶನ್ ಮನೆಯ ಸಿಬ್ಬಂದಿ, ಈ ಜಾಗದಲ್ಲಿ ನೀವು ಕಾರು ಪಾರ್ಕ್ ಮಾಡುವಂತಿಲ್ಲ ಎಂದಿದ್ದಾರೆ. ಮಹಿಳೆ ಹಾಗೂ ದರ್ಶನ್​ರ ಸಿಬ್ಬಂದಿ ನಡುವೆ ವಾಗ್ವಾದ ನಡೆದಿದೆ. ಬಳಿಕ ನಾಯಿಗಳು ಮಹಿಳೆಯ ಮೇಲೆ ದಾಳಿ ನಡೆಸಿ ಹೊಟ್ಟೆ ಹಾಗೂ ಕೈಗೆ ಕಚ್ಚಿ ಗಾಯಗೊಳಿಸಿವೆ. 

   ಗಾಯಗೊಂಡ ಮಹಿಳೆ ಆರ್​ಆರ್ ನಗರ ಪೊಲೀಸ್ ಠಾಣೆಗೆ ಹೋಗಿ ಘಟನೆ ಸಂಬಂಧ ಪ್ರಕರಣ ದಾಖಲಿಸಿದ್ದು, ಮನೆಯ ಸಿಬ್ಬಂದಿಗಳನ್ನು ಮೊದಲ ಆರೋಪಿಯನ್ನಾಗಿಸಿದ್ದರೆ, ನಟ ದರ್ಶನ್​ರನ್ನು ಎರಡನೇ ಆರೋಪಿಯನ್ನಾಗಿಸಿ ದೂರು ನೀಡಲಾಗಿದೆ ಎಂದು ತಿಳಿದುಬಂದಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap