ವಿಜಯಪುರ :
ಇಬ್ಬರು ಮಕ್ಕಳು ಆಕಸ್ಮಿಕವಾಗಿ ಕೃಷಿ ಹೊಂಡದಲ್ಲಿ ಬಿದ್ದು ಸಾವನಪ್ಪಿರುವ ಘಟನೆ ಕೊಲ್ಹಾರ ತಾಲ್ಲೂಕಿನ ಚಿಕ್ಕಆಸಂಗಿ ಗ್ರಾಮದಲ್ಲಿ ನಡೆದಿದೆ.
ಚಿಕ್ಕಆಸಂಗಿ ಗ್ರಾಮದ ಆಕಾಶ ಮಹಾದೇವ ಬೆನ್ನೂರ (4) ಹಾಗೂ ಬೋರಮ್ಮ ಸಂಗಣ್ಣ ಬೆನ್ನೂರು (4) ಸಾವನ್ನಪ್ಪಿರುವ ಕಂದಮ್ಮಗಳು.
ಮನೆಯ ಪಕ್ಕದ ಚಿಕ್ಕಪ್ಪನ ಜಮೀನಿನಲ್ಲಿ ಆಟವಾಡುತ್ತಾ ಹೋಗಿ ಅಲ್ಲಿರುವ ಕೃಷಿ ಹೊಂಡದಲ್ಲಿ ಬಿದ್ದು ಸಾವಿಗೀಡಾಗಿದ್ದಾರೆ. ಕೊಲಾರ ಪಿಎಸ್ಐ ಸಿದ್ದಪ್ಪ ಯಡಹಳ್ಳಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ, ದೂರು ದಾಖಲಿಸಿಕೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/05/Dead-body.gif)