ದೀಪಾವಳಿ ಹಬ್ಬಕ್ಕೆ NWKRTCಯಿಂದ ವಿಶೇಷ ಬಸ್….!

ಬೆಂಗಳೂರು

    ದೀಪಾವಳಿ ಹಬ್ಬ ಹಿನ್ನೆಲೆಯಲ್ಲಿ ಸಾರ್ವಜನಿಕರು ತಮ್ಮ ಊರುಗಳಿಗೆ ತೆರಳುತ್ತಾರೆ. ಮತ್ತು ಹಬ್ಬ ಮುಗಿಸಿಕೊಂಡು ವಾಪಸ್​ ಆಗುತ್ತಾರೆ. ಇದರಿಂದ ಸರ್ಕಾರಿ ಬಸ್​ಗಳಲ್ಲಿ  ಪ್ರಯಾಣಿಕರ ಸಂಖ್ಯೆ ಹೆಚ್ಚಾಳವಾಗಲಿದೆ. ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸಲು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹೆಚ್ಚುವರಿ ಬಸ್​ಗಳನ್ನು ರಸ್ತೆಗೆ ಇಳಿಸಲಿದೆ. ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಸಂದೇಶ ಪ್ರಕಟಿಸುವ ಮೂಲಕ ಎನ್​ಡಬ್ಲೂಕೆಆರ್​ಟಿಸಿ ಮಾಹಿತಿ ನೀಡಿದೆ.

    ಬೆಂಗಳೂರು, ಮಂಗಳೂರು, ಪುಣೆ, ಗೋವಾ, ಹೈದರಾಬಾದ್​​ ನಗರಗಳಿಂದ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಚಿಕ್ಕೋಡಿ, ಉತ್ತರ ಕನ್ನಡ, ಹಾವೇರಿ ಮತ್ತು ಬಾಗಲಕೋಟೆ ಸೇರಿದಂತೆ ಇನ್ನೀತರ ಸ್ಥಳಗಳಿಗೆ ಹೆಚ್ಚುವರಿ ಬಸ್​ಗಳು ಕಾರ್ಯ ನಿರ್ವಹಿಸಲಿವೆ​. ಪ್ರಯಾಣಿಕರು ಇದರ ಸದುಪಯೋಗಪಡಿಸಿಕೊಳ್ಳಬಹುದಾಗಿದೆ. ಇ-ಟಿಕೇಟ್ ಬುಕಿಂಗ್‌ನ್ನು www.ksrtc.karnataka.gov.in ವೆಬ್​ಸೈಟ್ ಮುಖಾಂತರ ಮಾಡಬಹುದಾಗಿದ್ದು, ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್​ ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗುವುದು ಎಂದು ನಿಗಮ ತಿಳಿಸಿದೆ.
   ಎನ್​ಡಬ್ಲೂಕೆಆರ್​ಟಿಸಿ ಈ ಹಿಂದೆ ದಸರಾ ಹಬ್ಬದ ಸಂದರ್ಭದಲ್ಲಿಯೂ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಬಸ್​ಗಳನ್ನು ಓಡಿಸಿತ್ತು. ಇದರಿಂದ ಪ್ರಯಾಣಿಕರಿಗೆ ಹೆಚ್ಚು ಅನುಕೂಲವಾಗಿತ್ತು. ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸುವಲ್ಲಿ ಎನ್​ಡಬ್ಲೂಕೆಆರ್​ಟಿಸಿ ಯಶಸ್ವಿಯಾಗಿತ್ತು.

Recent Articles

spot_img

Related Stories

Share via
Copy link