ನವದೆಹಲಿ:
ಕೇಂದ್ರ ಸರ್ಕಾರ ತಮ್ಮನ್ನು ಎಲ್ಲ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ನಿರ್ಬಂಧಿತ ರಜೆಯಲ್ಲಿ ಕಳಿಸಿರುವ ಕ್ರಮವನ್ನು ಪ್ರಶ್ನಿಸಿ ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ.
ಸುಪ್ರೀಂಕೋರ್ಟ್ ಅಲೋಕ್ ವರ್ಮಾ ಅವರ ಅರ್ಜಿಯನ್ನು ಸ್ವೀಕರಿಸಿದ್ದು, ಅಕ್ಟೋಬರ್ 26ರಂದು ವಿಚಾರಣೆ ನಡೆಸುವುದಾಗಿ ಮುಖ್ಯನ್ಯಾಯಮೂರ್ತಿ ರಂಜನ್ ಗೊಗೋಯ್ ಅವರ ನೇತೃತ್ವದ ಪೀಠ ಹೇಳಿದೆ.
ವರ್ಮಾ ಇನ್ನೂ ಎರಡು ತಿಂಗಳು ತಮ್ಮ ಅಧಿಕಾರ ಅವಧಿಯನ್ನು ಹೊಂದಿದ್ದಾರೆ. ಕೇಂದ್ರ ಸರ್ಕಾರ ಅವರನ್ನು ಅಧಿಕೃತವಾಗಿ ತೆಗೆಯಲು ಸಾಧ್ಯವಿಲ್ಲ ಎಂದು ವಾದ ಮಂಡಿಸಿದ್ದಾರೆ.
ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಮತ್ತು ವಿಶೇಷ ನಿರ್ದೇಶಕ ರಾಕೇಶ್ ಅಸ್ತಾನಾ ನಡುವೆ ನಡೆಯುತ್ತಿರುವ ಹಗ್ಗಜಗ್ಗಾಟ ಸರ್ಕಾರಕ್ಕೆ ಮತ್ತು ಸಿಬಿಐ ಸಂಸ್ಥೆಗೆ ತಲೆನೋವು ತಂದೊಡ್ಡಿತ್ತು. ಇಬ್ಬರು ಅಧಿಕಾರಿಗಳ ಜಗಳ ತಾರಕಕ್ಕೇರುತ್ತಿದ್ದಂತೆ ಮಂಗಳವಾರ ಮಧ್ಯರಾತ್ರಿ ಪ್ರಧಾನಿ ನರೇಂದ್ರ ಮೋದಿ ನೇಮಕಾತಿ ಸಮಿತಿಯ ತುರ್ತು ಸಭೆ ಕರೆದು ಈ ತೀರ್ಮಾನ ಕೈಗೊಂಡಿದ್ದಾರೆ.
ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇಂದು ಮುಂಜಾನೆ ಅವರಿಬ್ಬರನ್ನೂ ರಜೆಯ ಮೇಲೆ ಕಳಿಸಿ ಎಂ.ನಾಗೇಶ್ವರ್ ರಾವ್ ಅವರನ್ನು ಸಿಬಿಐನ ಹಂಗಾಮಿ ಮುಖ್ಯಸ್ಥರನ್ನಾಗಿ ನೇಮಕ ಮಾಡಿ ತಕ್ಷಣ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
