ಬೆಂಗಳೂರು:
ಕೆಪಿಸಿಸಿ ವಕ್ತಾರ ರಮೇಶ್ ಬಾಬು ಅವರನ್ನು ದೇವರಾಜ ಅರಸು ಟ್ರಕ್ ಟರ್ಮಿನಲ್ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.
ರಮೇಶ್ ಬಾಬು ಅವರಿಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡಲಾಗಿದ್ದು, ಅವರ ಅಧಿಕಾರವಧಿ ಎರಡು ವರ್ಷ ಇರಲಿದೆ. ಈ ಸಂಬಂಧ ತಕ್ಷಣ ಆದೇಶ ಹೊರಡಿಸುವಂತೆ ಮುಖ್ಯ ಕಾರ್ಯದರ್ಶಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಈ ನಡುವೆ ಕರ್ನಾಟಕ ರಾಜ್ಯ ಅನುಸೂಚಿತ ಜಾತಿ (ಎಸ್ ಸಿ) ಅನುಸೂಚಿತ ಬುಡಕಟ್ಟುಗಳ ಎಸ್ ಟಿ ಆಯೋಗದ ಅಧ್ಯಕ್ಷ ಸ್ಥಾನವನ್ನು ನಿರಾಕರಿಸಿದ್ದ ಮಾಜಿ ಶಾಸಕ ಎಸ್.ಜಯಣ್ಣ ಅವರನ್ನು ಕರ್ನಾಟಕ ರಾಜ್ಯ ಉಗ್ರಣ ನಿಗಮದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ
![](https://prajapragathi.com/wp-content/uploads/2024/03/devaraj-arasu-truck-terminal.gif)