ತುಮಕೂರು:
ಜೆಡಿಎಸ್ ಅಭ್ಯರ್ಥಿ ಆರ್.ಅನಿಲ್ಕುಮಾರ್ ಪರ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಪ್ರಚಾರ ನಡೆಸಲಿದ್ದು, ಎರಡು ದಿನ ಜಿಲ್ಲೆಯಲ್ಲಿ ಮೊಕ್ಕಾಂ ಹೂಡಿ ಪಕ್ಷದ ಅಭ್ಯರ್ಥಿ ಗೆಲುವಿಗೆ ರಣತಂತ್ರ ಎಣೆಯಲಿದ್ದಾರೆ.
ಶುಕ್ರವಾರ ಬೆಳಿಗ್ಗೆ 11ಕ್ಕೆ ಗುಬ್ಬಿಯ ಬಾಲಾಜಿ ಕಲ್ಯಾಣ ಮಂಟಪದಲ್ಲಿ ಪ್ರಚಾರ ಸಭೆ ನಡೆಸಲಿರುವ ದೇವೇಗೌಡರು, ಸಂಜೆ 4ಕ್ಕೆ ತಿಪಟೂರಿನ ಒಕ್ಕಲಿಗರ ಸಮುದಾಯ ಭವನದಲ್ಲಿ ಪ್ರಚಾರ ಸಭೆ ನಡೆಸಲಿದ್ದಾರೆ. ರಾತ್ರಿ ತುಮಕೂರು ತಾಲೂಕು ಬಳಗೆರೆಯಲ್ಲಿ ಗ್ರಾಮಾಂತರ ಶಾಸಕ ಡಿ.ಸಿ.ಗೌರಿಶಂಕರ್ ನಿವಾಸದಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಮರುದಿನ ಶನಿವಾರ ಮಧ್ಯಾಹ್ನ 12ಕ್ಕೆ ಚಿಕ್ಕನಾಯಕನಹಳ್ಳಿ ಪಟ್ಟಣದ ತಾತಯ್ಯನಗೋರಿ ಸಮುದಾಯ ಭವನದಲ್ಲಿ ಪ್ರಚಾರ ಸಭೆ ನಡೆಸಲಿರುವ ದೇವೇಗೌಡರು , ಮಧ್ಯಾಹ್ನ 3.30ಕ್ಕೆ ಕುಣಿಗಲ್ನ ಎಸ್ವಿಬಿ ಕನ್ವೆನ್ಶನ್ ಹಾಲ್ನಲ್ಲಿ ಜೆಡಿಎಸ್ ಅಭ್ಯರ್ಥಿ ಪರ ಮತಯಾಚಿಸಲಿದ್ದಾರೆ. ಅಸಮಾಧಾನಿತ ಜೆಡಿಎಸ್ ಶಾಸಕ ಶ್ರೀನಿವಾಸ್ ಅವರ ಗುಬ್ಬಿ ಕ್ಷೇತ್ರದಿಂದಲೇ ದೇವೇಗೌಡರು ಎರಡನೇ ಸುತ್ತಿನ ಪ್ರಚಾರ ಆರಂಭಿಸುತ್ತಿರುವುದು ವಿಶೇಷವಾಗಿ ಗಮನಸೆಳೆದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
