ರಕ್ಷಣಾ ಸಚಿವರಿಗೆ ಕೊರೋನಾ ದೃಢ…!

ವದೆಹಲಿ:

   ಕರ್ನಾಟಕದ ವಿಧಾನ ಸಭೆ ಚುನಾವಣಾ ಹೊಸ್ತಿಲಿನಲ್ಲೇ ಕೇಂದ್ರ ಬಿಜೆಪಿ ನಾಯಕ ಹಾಗು ರಕ್ಷಣಾ ಸಚಿವ ರಾಜನಾಥ್​ ಸಿಂಗ್‌ ಅವರಿಗೆ ಕೊವಿಡ್​  ಸೋಂಕು ದೃಢಪಟ್ಟಿದ್ದು ವಿಶ್ರಾಂತಿಯನ್ನು ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

    ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಲ್ಲಿ ಕೊರೊನಾದ ಸೌಮ್ಯ ಲಕ್ಷಣ ಕಾಣಿಸಿಕೊಂಡಿದ್ದು, ವೈದ್ಯರ ಸಲಹೆ ಮೇರೆಗೆ ಔಷಧ ತೆಗೆದುಕೊಳ್ಳುತ್ತಿದ್ದಾರೆ. ಅವರಿಗೆ ವಿಶ್ರಾಂತಿ ತೆಗೆದುಕೊಳ್ಳಲು ವೈದ್ಯರು ಸೂಚನೆ ನೀಡಿದ್ದಾರೆ.

    ರಾಜನಾಥ್ ಸಿಂಗ್ ಅವರಿಗೆ ಕೊವಿಡ್​ 19 ಸೋಂಕು ದೃಢಪಟ್ಟ ಹಿನ್ನೆಲೆ ಇಂದು ದೆಹಲಿಯಲ್ಲಿ ನಡೆಯಲಿರುವ ಇಂಡಿಯನ್ ಏರ್​ಫೋರ್ಸ್​ ಕಮಾಂಡರ್​ಗಳ ಸಮ್ಮೇಳನದಲ್ಲಿ ಪಾಲ್ಗೊಳ್ಳಬೇಕಿತ್ತು. ಆದರೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದರಿಂದ ಅವರ ಪಾಲ್ಗೊಳ್ಳುವಿಕೆ ರದ್ದಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap