ದಿವ್ಯಾ ದಂಪತಿಗೆ ಜೈಲುಭಾಗ್ಯ, ಜಡ್ಜ್​​ ಮುಂದೆ ಸಿಐಡಿ ಅಧಿಕಾರಿ ವಿರುದ್ಧ ಆರೋಪಗಳ ಸುರಿಮಳೆ 

ಬೆಂಗಳೂರು/ ಕಲಬುರ್ಗಿ: 

ದಿವ್ಯಾ ಹಾಗರಗಿಯನ್ನು ಕಲಬುರಗಿ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿದೆ. ಪಿಎಸ್​ಐ ಪರೀಕ್ಷಾ ಅಕ್ರಮ ಆರೋಪದಡಿ ದಿವ್ಯಾ ಪತಿ ರಾಜೇಶ್ ಈಗಾಗಲೇ ಕಲಬುರಗಿ ಜೈಲು ಸೇರಿದ್ದಾನೆ. ಹಾಗಾಗಿ ಪತಿ-ಪತ್ನಿ ಇಬ್ಬರೂ ಜೈಲಲ್ಲಿರಬೇಕಾದ ಸ್ಥಿತಿ ಬಂದೊದಗಿದೆ.

545 ಪಿಎಸ್​ಐ ಹುದ್ದೆಗಳಿಗೆ ನೇಮಕಾತಿಯಲ್ಲಿ  ಅಕ್ರಮ ಪ್ರಕರಣದಲ್ಲಿ ಬೆಂಗಳೂರಿನ ಹೈಗ್ರೌಂಡ್ಸ್​ ಠಾಣೆ ಪೊಲೀಸರು ಬಂಧಿಸಿರುವ ಬಂಧಿತ 11 ಅಭ್ಯರ್ಥಿಗಳಿಗೆ 14 ದಿನ ನ್ಯಾಯಾಂಗ ಬಂಧನ ನೀಡಲಾಗಿದೆ.

ಪ್ರಕರಣದ ಇಬ್ಬರು ಆರೋಪಿಗಳಿಗೆ 4 ದಿನ ಸಿಐಡಿ ಕಸ್ಟಡಿ ನೀಡಿ ಬೆಂಗಳೂರಿನ 19ನೇ ಎಸಿಎಂಎಂ ನ್ಯಾಯಾಲಯ​ ಆದೇಶ ಮಾಡಿದೆ. ಈ ಮಧ್ಯೆ, ಬೆಂಗಳೂರಿನ ಈ ಆರೋಪಿಗಳು ಜಡ್ಜ್​​ ಮುಂದೆ ತನಿಖಾಧಿಕಾರಿಗಳ ವಿರುದ್ಧ ಆರೋಪಗಳ ಸುರಿಮಳೆಗೈದಿದ್ದಾರೆ. ಸಿಐಡಿ ಕಸ್ಟಡಿ ಅಂತ್ಯವಾದ ಹಿನ್ನೆಲೆ ಆರೋಪಿಗಳನ್ನು ಇಂದು 19 ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

ಕುತೂಹಲ ಮೂಡಿಸಿದೆ ಐಪಿಎಲ್ ಪ್ಲೇಆಫ್​ ರೇಸ್; ಹೀಗಿದೆ ಲೆಕ್ಕಾಚಾರ

ಖಾಲಿ ಪೇಪರ್​ ಮೇಲೆ ಸಿಐಡಿ ಸಹಿ ಪಡೆದಿದ್ದಾಗಿ ಆರೋಪ ಮಾಡಿರುವ ಆರೋಪಿಗಳು ವಿಚಾರಣೆಯ ವೇಳೆ ಅವಾಚ್ಯವಾಗಿ ತಮ್ಮನ್ನು ನಿಂದಿಸಿರುವುದಾಗಿ ಜಡ್ಜ್​ ಮುಂದೆ ಅಲವತ್ತುಕೊಂಡಿದ್ದಾರೆ. OMR ಮತ್ತು ಕಾರ್ಬನ್ ಕಾಪಿಯಲ್ಲಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ಬೆಂಗಳೂರಿನ ಹೈಗ್ರೌಂಡ್ಸ್​ ಠಾಣೆ ಪೊಲೀಸರು ಇವರನ್ನು ಬಂಧಿಸಿದ್ದರು.

ಮಳೆ-ಗಾಳಿಗೆ ಮನೆಯ ಮೇಲ್ಚಾವಣಿಯ ಸೀಮೆಂಟ್  ಶೀಟ್‌ಗಳು ಪುಡಿಪುಡಿ : ಬೀದಿಗೆ ಬಿದ್ದ  ನೇಕಾರರ ಕುಟುಂಬ

ದಿವ್ಯಾ-ರಾಜೇಶ್ ಹಾಗರಗಿ ದಂಪತಿಗೆ ಜೈಲುಭಾಗ್ಯ:

ಇನ್ನು ಅತ್ತ ಕಲಬುರಗಿಯಲ್ಲಿ ಬಿಜೆಪಿ ನಾಯಕಿ, ಹಗರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿಯನ್ನು ನ್ಯಾಯಾಂಗ ವಶಕ್ಕೆ ನೀಡಿ ಕಲಬುರಗಿ 3ನೇ ಜೆಎಂಎಫ್​ಸಿ ನ್ಯಾಯಾಲಯ ಆದೇಶಿಸಿದೆ. ದಿವ್ಯಾ ಹಾಗರಗಿ 11 ದಿನಗಳ ಸಿಐಡಿ ಕಸ್ಟಡಿ ಇಂದಿಗೆ ಅಂತ್ಯವಾದ ಬಳಿಕ, ಜಡ್ಜ್​​​ ಮುಂದೆ ಹಾಜರುಪಡಿಸಿದ್ದ ಸಿಐಡಿ ತನಿಖಾಧಿಕಾರಿಗಳು ದಿವ್ಯಾಳನ್ನ ಹಾರುಪಡಿಸಿದ್ದರು.

ತತ್ಫಲವಾಗಿ ದಿವ್ಯಾ ಹಾಗರಗಿಯನ್ನು ಕಲಬುರಗಿ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿದೆ. ಪಿಎಸ್​ಐ ಪರೀಕ್ಷಾ ಅಕ್ರಮ ಆರೋಪದಡಿ ದಿವ್ಯಾ ಪತಿ ರಾಜೇಶ್ ಈಗಾಗಲೇ (ಏಪ್ರಿಲ್ 18 ರಿಂದ) ಕಲಬುರಗಿ ಜೈಲು ಸೇರಿದ್ದಾನೆ. ಹಾಗಾಗಿ ಪತಿ-ಪತ್ನಿ ಇಬ್ಬರೂ ಜೈಲಲ್ಲಿರಬೇಕಾದ ಸ್ಥಿತಿ ಬಂದೊದಗಿದೆ.

ಮತ್ತೊಂದು ದಾಖಲೆ: 25ನೇ ದಿನಕ್ಕೆ ರಾಜಮೌಳಿಯ RRR ಕಲೆಕ್ಷನ್’ಗೆ ಸೆಡ್ಡು ಹೊಡೆದ ‘KGF 2’

ಪ್ರಕರಣದ ಕಿಂಗ್​ಪಿನ್ ‘ಕೈ’​ ಶಾಸಕ ಪ್ರಿಯಾಂಕ್​ ಖರ್ಗೆ ಬಂಟ:

545 ಪಿಎಸ್​ಐ ಹುದ್ದೆಗಳಿಗೆ ನೇಮಕಾತಿ ಅಕ್ರಮ ಪ್ರಕರಣದ ಬಗ್ಗೆ ಶಿವಮೊಗ್ಗದಲ್ಲಿ ಗೃಹ ಖಾತೆ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದು, ಪ್ರಕರಣದ ಕಿಂಗ್​ಪಿನ್ ‘ಕೈ’​ ಶಾಸಕ ಪ್ರಿಯಾಂಕ್​ ಖರ್ಗೆ ಬಂಟನಾಗಿದ್ದಾನೆ. ಈಗಾಗಲೇ ಆತನನ್ನ ಸಿಐಡಿ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಪರೀಕ್ಷಾ ಅಕ್ರಮದಲ್ಲಿ ಅನೇಕ ಅಧಿಕಾರಿಗಳು ಭಾಗಿ ಆಗಿದ್ದಾರೆ.

 ಪೆಟ್ರೋಲ್ ಬಾಂಬ್ ತಯಾರು, ಪೊಲೀಸರನ್ನ ಯಾಮಾರಿಸಲು ಹೋಗಿ ಸಿಕ್ಕಿಬಿದ್ದ ಗ್ಯಾಂಗ್

ಅಕ್ರಮದಲ್ಲಿ ಭಾಗಿಯಾದ ಅಧಿಕಾರಿಗಳನ್ನು ಬಂಧಿಸಲಾಗುತ್ತಿದೆ. ಇದು ಪ್ರಾಮಾಣಿಕತೆ ತನಿಖೆಯ ಸಂಕೇತವಾಗಿದೆ. ಶೀಘ್ರದಲ್ಲೇ ತನಿಖೆ ಮುಗಿಸಿ ಮರು ಪರೀಕ್ಷೆ ನಡೆಸಲಾಗುತ್ತದೆ. ಮತ್ತೆ ಈ ರೀತಿ ಆಗದಂತೆ ಅಚ್ಚುಕಟ್ಟಾಗಿ ಪರೀಕ್ಷೆ ನಡೆಸುತ್ತೇವೆ ಎಂದು ಹೇಳಿದ್ದಾರೆ.

              ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap