ಬೆಂಗಳೂರು:
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ರಾಜಕಾರಣಕ್ಕೆ ಸಂಬಂದಿಸಿದಂತೆ ಮೃದುಧೋರಣೆ ತಾಳುವಂತೆ ಹಿತವಚನ ನೀಡಿದ್ದಾರೆ.
ಬೆಂಗಳೂರಿನ ಅಪೊಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಕೆಪಿಸಿಸಿ ಅಧ್ಯಕ್ಷ ದಿನೇಶ್ಗುಂಡೂರಾವ್ ಸೇರಿದಂತೆ ಈ ಮೂವರು ನಾಯಕರೊಂದಿಗೆ 2 ಗಂಟೆಗೂ ಹೆಚ್ಚು ಕಾಲ ಚರ್ಚಿಸಿದರು.
ಬೆಳಗಾವಿ ರಾಜಕಾರಣಕ್ಕೆ ನೀವು ಎಂಟ್ರಿ ಕೊಡಬಾದಿತ್ತು, ನೀವು ರಾಜ್ಯ ನಾಯಕ ಎಂದು ಬಿಂಬಿಸಿಕೊಳ್ಳುವುದು ಸರಿಯಲ್ಲ. ನೀನು ಎರಡು ಜಿಲ್ಲೆಗೆ ಮಾತ್ರ ಸೀಮಿತವಾಗಿರುತ್ತಿಯಾ? ಸುಮ್ಮನೆ ನಿನ್ನ ಮೈಮೇಲೆ ನೀನೆ ವಿವಾದ ಏಕೆ ಎಳೆದುಕೊಳ್ಳುತ್ತೀಯಾ ಎಂದು ನೀತಿ ಬೋಧನೆ ಮಾಡಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
