ಬೆಂಗಳೂರು:
ಬೆಂಗಳೂರು ಮಹಾನಗರದಲ್ಲಿ ದಿನನಿತ್ಯ ಉಂಟಾಗುತ್ತಿರುವ ವಾಹನ ದಟ್ಟಣೆ ತಪ್ಪಿಸಲು ಶಾಲೆಗಳು ಮತ್ತು ಕೈಗಾರಿಕೆಗಳ ಕಾರ್ಯನಿರ್ವಹಣೆ ಸಮಯ ಬದಲಾವಣೆ ಮಾಡಬೇಕು ಎಂದು ಸರ್ಕಾರಕ್ಕೆ ಹೈಕೋರ್ಟ್ ಸಲಹೆ ನೀಡಿದೆ.
ಈ ಸಂಬಂಧ ಶಾಲೆಗಳು, ಕೈಗಾರಿಕೆಗಳು, ವಾಣಿಜ್ಯ ಸಂಸ್ಥೆಗಳು ಮತ್ತು ಕಂಪನಿಗಳ ಪ್ರತಿನಿಧಿಗಳು ಸೇರಿದಂತೆ ಸಂಬಂಧಿಸಿದ ಪಾಲುದಾರರ ಸಭೆ ಕರೆದು ಚರ್ಚೆ ನಡೆಸುವಂತೆ ನ್ಯಾಯಾಲಯ ತಾಕೀತು ಮಾಡಿದೆ.
ಬಳ್ಳಾರಿ ರಸ್ತೆ ವಿಸ್ತರಣೆ ಸಂಬಂಧ ಸರ್ಕಾರೇತರ ಸಂಸ್ಥೆ ಸಮರ್ಪಣಾ ಸಾಮಾಜಿಕ- ಸಾಂಸ್ಕೃತಿಕ ಸಂಸ್ಥೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ಮಂಗಳವಾರ ವಿಚಾರಣೆ ನಡೆಸಿತು.
ಅಂತೆಯೇ, ಕೈಗಾರಿಕೆ ಮತ್ತು ಕಾರ್ಮಿಕ ಇಲಾಖೆ ಕಾರ್ಯದರ್ಶಿ ಮೂಲಕ ಎಲ್ಲ ಕೈಗಾರಿಕೆಗಳ ಒಕ್ಕೂಟಗಳು, ಕಾರ್ಮಿಕ ಸಂಘಟನೆಗಳು, ವಾಣಿಜ್ಯ ಮತ್ತು ಕೈಗಾರಿಕೆಗಳ ಮಹಾಸಂಸ್ಥೆಗಳ ಒಕ್ಕೂಟ, ಕಂಪನಿಗಳ ಪ್ರತಿನಿಧಿಗಳ ಜತೆ ಚರ್ಚೆ ನಡೆಸಿ ಕೆಲಸದ ಅವಧಿಯನ್ನು ಬದಲಾವಣೆ ಮಾಡಬಹುದು ಎಂದು ನ್ಯಾಯಪೀಠ ಸೂಚಿಸಿತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
