ದೆಹಲಿಯಿಂದ ಜೈಪುರಕ್ಕೆ ಸೋನಿಯಾಗಾಂಧಿ ಶಿಫ್ಟ್‌ : ಕಾರಣ ಗೊತ್ತೇ…..?

ನವದೆಹಲಿ:

      ದೆಹಲಿಯಲ್ಲಿ ಮಾಲಿನ್ಯದಿಂದ ಉಂಟಾಗುವ ವಿಷಪೂರಿತ ಗಾಳಿಯನ್ನು ತಪ್ಪಿಸಲು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಜೈಪುರಕ್ಕೆ ಸ್ಥಳಾಂತರಗೊಂಡಿದ್ದು, ಕೆಲವು ದಿನಗಳ ಕಾಲ ಅಲ್ಲಿಯೇ ತಂಗಲಿದ್ದಾರೆಂದು ವರದಿಗಳು ತಿಳಿಸಿವೆ.

     ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ಜನ್ಮದಿನದಂದು ಅವರಿಗೆ ಪುಷ್ಪ ನಮನ ಸಲ್ಲಿಸಲು ನವೆಂಬರ್ 14 ರಂದು ಬೆಳಿಗ್ಗೆ ಶಾಂತಿವನ ಸ್ಮಾರಕವನ್ನು ತಲುಪಿದ ಸೋನಿಯಾ ಗಾಂಧಿ ಅವರು ಮಾಸ್ಕ್​ ಧರಿಸಿದ್ದರು. ಈ ವೇಳೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೂ ಇದ್ದರು.

    ಸೋನಿಯಾ ಗಾಂಧಿ ಬಹಳ ದಿನಗಳಿಂದ ಅಸ್ತಮಾದಿಂದ ಬಳಲುತ್ತಿದ್ದು, ಈ ನಡುವಲ್ಲೇ ದೆಹಲಿಯಲ್ಲಿ ವಾಯು ಮಾಲಿನ್ಯ ಹೆಚ್ಚಿರುವ ಹಿನ್ನೆಲೆಯಲ್ಲಿ ವಿಷಕಾರಿ ಗಾಳಿಯು ಅಪಾಯಕಾರಿ ಎಂದು ವೈದ್ಯರು ಹೇಳಿದ್ದಾರೆ, ಈ ಹಿನ್ನೆಲೆಯಲ್ಲಿ ಸೋನಿಯಾ ಅವರು ಜೈಪುರಕ್ಕೆ ಸ್ಥಳಾಂತರಗೊಂಡಿದ್ದಾರೆಂದು ಹೇಳಲಾಗುತ್ತಿದೆ.

   ದೆಹಲಿಯಲ್ಲಿ ದೀಪಾವಳಿ ನಂತರ ಮಾಲಿನ್ಯ ಮತ್ತೊಮ್ಮೆ ಹೆಚ್ಚಾಗಿದೆ. ಮಂಗಳವಾರ ಬೆಳಗಿನ ಜಾವವೂ ಗಾಳಿಯ ಗುಣಮಟ್ಟ ತೀರಾ ಕಳಪೆಯಾಗಿ ದಾಖಲಾಗಿದೆ.ದೆಹಲಿಯಲ್ಲಿ ಬೆಳಗ್ಗೆ 8 ಗಂಟೆಗೆ ವಾಯು ಗುಣಮಟ್ಟ ಸೂಚ್ಯಂಕ (ಎಕ್ಯೂಐ) 435ರಲ್ಲಿ ದಾಖಲಾಗಿದೆ. ಆದರೆ AQI ನೋಯ್ಡಾದಲ್ಲಿ 418 ಮತ್ತು ಗುರುಗ್ರಾಮ್‌ನಲ್ಲಿ 391 ತಲುಪಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap