ರಾಯಚೂರಿನಲ್ಲಿ 144 ಸೆಕ್ಷನ್‌ ಜಾರಿ : ಕಾರಣ ಗೊತ್ತೆ…?

ಬೆಳಗಾವಿ: 

   ಉತ್ತರ ಕರ್ನಾಟಕದಲ್ಲಿ ನೀರಿನ ಅಭಾವ ಹೆಚ್ಚಾದ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲಾಡಳಿತ ಜೂನ್ 17ರಿಂದ 27ರವರೆಗೆ 144 ಕಲಂ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಕಾಲುವೆ ಮೂಲಕ ನಗರಕ್ಕೆ ನೀರು ಹರಿಸುತ್ತಿದೆ.

   ತುಂಗಭದ್ರಾ ಅಣೆಕಟ್ಟಿನಿಂದ ತುಂಗಭದ್ರಾ ಎಡದಂಡೆ ಕಾಲುವೆಗೆ (ಟಿಎಲ್‌ಬಿಸಿ) ನೀರು ಬಿಡುವ ಮುನ್ನವೇ ನಾಲೆಯಿಂದ ನೀರು ಹರಿಸುವುದನ್ನು ತಡೆಯಲು ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿಗೊಳಿಸಿದೆ. ಪ್ರಸ್ತುತ ಕೃಷ್ಣಾ ನದಿಯಿಂದ ರಾಯಚೂರು ನಗರಕ್ಕೆ ಐದು ದಿನಕ್ಕೊಮ್ಮೆ ನೀರು ಸರಬರಾಜು ಮಾಡಲಾಗುತ್ತಿದೆ.

   ಬಿಕ್ಕಟ್ಟು ನಿವಾರಿಸಲು ತುಂಗಭದ್ರಾ ಜಲಾಶಯದಿಂದ ಕಾಲುವೆ ಮೂಲಕ ನೀರು ಹರಿಸಲು ಜಿಲ್ಲಾಡಳಿತ ನಿರ್ಧರಿಸಿದೆ. ಅಣೆಕಟ್ಟಿಯಿಂದ ಬಿಡುಗಡೆಯಾಗುವ ನೀರು ಟಿಎಲ್‌ಬಿಸಿ ಮೂಲಕ ಸುಮಾರು 130 ಮೈಲುಗಳವರೆಗೆ ಹರಿಯುತ್ತದೆ. ಮೊದಲು ಬಂಗಾರಪ್ಪ ಕೆರೆಯಲ್ಲಿರುವ ಬ್ಯಾಲೆನ್ಸಿಂಗ್ ಜಲಾಶಯದಲ್ಲಿ ನೀರು ಸಂಗ್ರಹಗೊಂಡು ನಂತರ ರಾಂಪುರ ಕೆರೆ ಜಲಾಶಯಕ್ಕೆ ಹರಿಸಲಾಗುವುದು. ನಂತರ ರಾಯಚೂರು ನಗರಕ್ಕೆ ಕುಡಿಯುವ ಉದ್ದೇಶಕ್ಕೆ ನೀರು ಬಿಡಲಾಗುವುದು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap