ಸಕಲ ಸರ್ಕಾರಿ ಗೌರವದೊಂದಿದೆ ಧ್ರುವನಾರಾಯಣ್‌ ಅಂತ್ಯಕ್ರಿಯೆ : ಸಿಎಂ

ಬೆಂಗಳೂರು

  ಮಾಜಿ ಸಂಸದ ಧ್ರುವ ನಾರಾಯಣ ಸಕಲ ಸರ್ಕಾರಿ ಗೌರವದೊಂದಿದೆ ನೆರವೇರಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಧ್ರುವ ನಾರಾಯಣ ಅವರು ಶನಿವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಹಠಾತ್ ಹೃದಯಾಘಾತ ಸಂಭವಿಸಿದ ಕೂಡಲೇ ಅವರನ್ನು ಮೈಸೂರಿನ ಡಿಆರ್​ಎಂಎಸ್​​ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಹಲೋಕ ತ್ಯಜಿಸಿದ್ದಾರೆ.

  1961 ಜುಲೈ 31ರಂದು ಚಾಮರಾಜನಗರ ಜಿಲ್ಲೆಯ ಹೆಗ್ಗವಾಡಿ ಗ್ರಾಮದಲ್ಲಿ ಜನನಿಸಿದ್ದ ಧ್ರುವನಾರಾಯಣ, ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಿಂದ ಬಿಎಸ್​​ಸಿ ಕೃಷಿ ಪದವಿ ಪಡೆದುಕೊಂಡಿದ್ದರು. ನಂತರ ಸ್ನಾತಕೋತ್ತರ ಪದವಿ ಪಡೆದು, 1983ರಲ್ಲಿ ಸಾಮಾನ್ಯ ಕಾರ್ಯಕರ್ತನಾಗಿ ಕಾಂಗ್ರೆಸ್​ಗೆ ಸೇರ್ಪಡೆಗೊಂಡಿದ್ದರು. 2004ರಲ್ಲಿ ಸಂತೇಮರಹಳ್ಳಿ ವಿಧಾನ ಸಭಾ ಕ್ಷೇತ್ರ ಹಾಗೂ 2008ರಲ್ಲಿ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಗಳಿಂದ ಶಾಸಕರಾಗಿ ಜಯ ಗಳಿಸಿದ್ದರು.

    1999ರಲ್ಲಿ ಸಂತೇಮರಹಳ್ಳಿ ಕ್ಷೇತ್ರದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸಿನ ಎ.ಆರ್. ಕೃಷ್ಣಮೂರ್ತಿ ಅವರ ಎದುರು ಪರಾಜಿತರಾದರು. ಆದರೆ ಇದೇ ಕೃಷ್ಣಮೂರ್ತಿ ಅವರನ್ನು 2004ರ ವಿಧಾನಸಭಾ ಚುನಾವಣೆಯಲ್ಲಿ ಕೇವಲ 1 ಮತದಿಂದ ಧೃವನಾರಾಯಣ ಸೋಲಿಸಿದ್ದರು. ಹಾಗೆಯೇ 2009 ಹಾಗೂ 2014ರ ಲೋಕಸಭಾ ಚುನಾವಣೆಯಲ್ಲಿ ಕೂಡ ಕೃಷ್ಣಮೂರ್ತಿ ಅವರನ್ನು ಸೋಲಿಸಿ ಸಂಸದರಾದರು.

    ಈ ಕುರಿತು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಧ್ರುವ ನಾರಾಯಣ್ ಅವರು ನನ್ನ ಆತ್ಮೀಯ ಸ್ನೇಹಿತರಾಗಿದ್ದರು. ವಿರೋಧ ಪಕ್ಷದಲ್ಲಿದ್ದರೂ ಕೂಡ ರಾಜ್ಯದ ಅಭಿವೃದ್ಧಿಯಲ್ಲಿ ಸಾಕಷ್ಟು ಬಾರಿ ಮುಕ್ತವಾಗಿ ಚರ್ಚೆ ಮಾಡಿದ್ದೆವು. ಅವರ ಚಿಂತನೆ ಮತ್ತು ನಮ್ಮ ಚಿಂತನೆಯಲ್ಲಿ ಸಾಮ್ಯವಿತ್ತು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap