ಕರಾವಳಿಯಲ್ಲಿ ಅಮಿತ್‌ ಷಾ : ಮದ್ಯ ಮಾರಾಟ ನಿಷೇಧ

ಮಂಗಳೂರು: 

     ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಹಿಂದುತ್ವದ ಮತ್ತು ಕೇಸರಿಪಡೆಯ ಭದ್ರ ನೆಲೆ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ.

    ಕಳೆದ ವರ್ಷದಿಂದ ಈ ಭಾಗದಲ್ಲಿ ಹಿಜಾಬ್ ವಿವಾದ, ಧರ್ಮ ದಂಗಲ್, ಹಿಂದೂ ಮುಸ್ಲಿಂ ಸಮುದಾಯಗಳ ಘರ್ಷಣೆ, ಕೊಲೆ, ಹಿಂಸಾಚಾರಗಳಿಂದ ಬಿಜೆಪಿ ಬಗ್ಗೆ ಜನರಲ್ಲಿ ಒಂದು ರೀತಿಯ ಅಸಮಾಧಾನವಿದೆ.

     ಚುನಾವಣೆ ಹೊಸ್ತಿಲಿನಲ್ಲಿ ಈ ಭಾಗದ ಕಾರ್ಯಕರ್ತರು, ನಾಯಕರಿಗೆ ಉತ್ತೇಜನ ನೀಡಲು ಅಮಿತ್ ಶಾ ಭೇಟಿ ಮಹತ್ವವಾಗಿದೆ.ಮದ್ಯ ಮಾರಾಟ ನಿಷೇಧ: ವಿವಿಧ ಕಾರ್ಯಕ್ರಮಗಳ ನಿಮಿತ್ತ ಪುತ್ತೂರು ವಲಯ ವ್ಯಾಪ್ತಿಗೆ ಭೇಟಿ ನೀಡುವ ಹಿನ್ನಲೆಯಲ್ಲಿ ಇಂದು ಪುತ್ತೂರು ವಲಯ ವ್ಯಾಪ್ತಿಯಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.

    ಈ ಕುರಿತಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಂ ಆರ್ ರವಿಕುಮಾರ್ ಆದೇಶ ಹೊರಡಿಸಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡುವ ಸಲುವಾಗಿ ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ. ಹೀಗಾಗಿ ಪುತ್ತೂರು ವಲಯ ವ್ಯಾಪ್ತಿಯಲ್ಲಿ ಇಂದು ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap