ಚಿಕ್ಕಬಳ್ಳಾಪುರ
ಗಂಗಮ್ಮ ದೇವಿ ವಿಗ್ರಹದ ಮೇಲೆ ಕಾಲಿಟ್ಟು ಅನ್ಯಕೋಮಿನ ಯುವತಿಯರು ದುರ್ವರ್ತನೆ ತೋರಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಶ್ರೀನಿವಾಸ ಸಾಗರದ ಬಳಿ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಹಿಂದೂಪರ ಸಂಘಟನೆಗಳು ಆಕ್ರೋಶ ಹೊರಹಾಕಿವೆ.
ಶ್ರೀನಿವಾಸಸಾಗರ ಜಲಾಶಯದ ಬಳಿ ಮೇಲಿನಿಂದ ಧುಮುಕುವ ನೀರಿನಲ್ಲಿ ಆಟವಾಡುವ ಸಮಯದಲ್ಲಿ ಗಂಗಮ್ಮ ದೇವಿ ವಿಗ್ರಹದ ಮೇಲೆ ಮಹಿಳೆಯರು ಕಾಲಿಟ್ಟು ದುರ್ವರ್ತನೆ ತೋರಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗ್ತಿದ್ದಂತೆ ಹಿಂದೂಪರ ಮುಖಂಡರುಗಳಿಂದ ಆಕ್ರೋಶ ವ್ಯಕ್ತವಾಗಿದೆ. ಕಳೆದ ಮೂರು ದಿನಗಳ ಹಿಂದೆ ಜಲಾಶಯಕ್ಕೆ ಬಂದವರಿಂದ ಕೃತ್ಯ ನಡೆದಿದೆ. ಈ ರೀತಿ ದುರ್ವರ್ತನೆ ತೋರಿದವರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಕೇಳಿ ಬಂದಿದೆ.








