ಕೋಲ್ಕತ್ತಾ:
ಪಶ್ಚಿಮ ಬಂಗಾಳದ ಬಹು-ಕೋಟಿ ಪಡಿತರ ವಿತರಣೆ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಪಶ್ಚಿಮ ಬಂಗಾಳ ಸಚಿವ ಜ್ಯೋತಿಪ್ರಿಯೋ ಮಲ್ಲಿಕ್ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಶುಕ್ರವಾರ ಬಂಧಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಸುಮಾರು 17-18 ಗಂಟೆಗಳ ವಿಚಾರಣೆಯ ನಂತರ ಇಂದು ಬೆಳಗಿನ ಜಾವ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಸಚಿವ ಮಲ್ಲಿಕ್ ಅವರನ್ನು ಬಂಧಿಸಲಾಯಿತು ಎಂದು ಅವರು ಹೇಳಿದ್ದಾರೆ.
ಕೋಲ್ಕತ್ತಾದ ಹೊರವಲಯದಲ್ಲಿರುವ ಸಾಲ್ಟ್ ಲೇಕ್ ಪ್ರದೇಶದಲ್ಲಿರುವ ಸಚಿವರ ಮನೆಯಿಂದ 3.30 ರ ಸುಮಾರಿಗೆ ಕೇಂದ್ರೀಯ ತನಿಖಾ ಸಂಸ್ಥೆಯ ಕಚೇರಿಗೆ ಮಲ್ಲಿಕ್ ಅವರನ್ನು ಕರೆದೊಯ್ಯಲಾಯಿತು ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ.
ಮಲ್ಲಿಕ್ ಅವರನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಮತ್ತು ಹೆಚ್ಚಿನ ವಿಚಾರಣೆಗಾಗಿ ಇಡಿ ಅವರನ್ನು ತನ್ನ ಕಸ್ಟಡಿಗೆ ಕೇಳಲಿದೆ ಎಂದು ಅವರು ಹೇಳಿದ್ದಾರೆ.
“ನಾನು ದೊಡ್ಡ ಪಿತೂರಿಯ ಬಲಿಪಶು”. ಬಿಜೆಪಿ ನಾಯಕ ಹಾಗೂ ಟಿಎಂಸಿ ಪಕ್ಷದ ಮಾಜಿ ಸಹೋದ್ಯೋಗಿ ಸುವೇಂದು ಅಧಿಕಾರಿ ಈ ಸಂಚು ರೂಪಿಸಿದ್ದಾರೆ ಎಂದು ಎಂದು ಬಂಧನದ ಬಳಿಕ ಸಚಿವ ಮಲ್ಲಿಕ್ ಅವರು ಆರೋಪಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2023/10/dds.jpg)