ಜೈಲಿನಲ್ಲಿದ್ದರು ರನ್ಯ ರಾವ್‌ ಗೆ ತಪ್ಪದ ಸಂಕಷ್ಟ…!

ಬೆಂಗಳೂರು :

    ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಕನ್ನಡದ ನಟಿ ರನ್ಯಾ ರಾವ್  ಬಂಧನ ಮಾಡಿ ಕೆಲವು ತಿಂಗಳು ನಡೆದಿದೆ. ಸದ್ಯ ಅವರ ವಿರುದ್ಧ ನಾನಾ ಪ್ರಕರಣಗಳು ದಾಖಲಾಗಿವೆ. ಈ ಎಲ್ಲಾ ಕಾರಣಕ್ಕೆ ಅವರಿಗೆ ಜಾಮೀನು ಸಿಕ್ಕರೂ ಜೈಲಿನಿಂದ ಬಿಡುಗಡೆ ಭಾಗ್ಯ ಸಿಕ್ಕಿಲ್ಲ. ಹೀಗಿರುವಾಗಲೇ ರನ್ಯಾ ರಾವ್ ಪ್ರಕರಣಕ್ಕೆ ಆದಾಯ ತೆರಿಗೆ ಇಲಾಖೆ ಎಂಟ್ರಿ ಕೊಟ್ಟಿದೆ. ಕೆಲವು ದಿನಗಳ ಕಾಲ ಅವರನ್ನು ವಿಚಾರಣೆ ಮಾಡಲು ಐಟಿ ಇಲಾಖೆ ಮುಂದಾಗಿದ್ದು, ಸಂಕಷ್ಟ ಹೆಚ್ಚುವ ಸಾಧ್ಯತೆ ಇದೆ.

   
    ಈಗ ಐಟಿ ಇಲಾಖೆ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯದಿಂದ ರನ್ಯಾ ವಿಚಾರಣೆಗೆ ಅನುಮತಿ ಪಡೆದಿದೆ. ಇಂದಿನಿಂದ  ಜೂನ್ 13ರವರೆಗೆ ವಿಚಾರಣೆ ನಡೆಯಲಿದೆ. ರನ್ಯಾ ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದು, ಅಲ್ಲಿಯೇ ಅವರು ವಿಚಾರಣೆಗೆ ಒಳಗಾಗಲಿದ್ದಾರೆ. ಇಷ್ಟು ದಿನ ಜೈಲಿನಲ್ಲಿ ಹಾಯಾಗಿದ್ದ ಅವರಿಗೆ ಈಗ ಮತ್ತೆ ವಿಚಾರಣೆಯ ಭೂತ ಕಾಡಿದೆ. ಈ ವಿಚಾರಣೆ ವೇಳೆ ಮತ್ತಷ್ಟು ದೊಡ್ಡ ವಿಚಾರಗಳು ಬಹಿರಂಗ ಆಗುವ ಸಾಧ್ಯತೆ ಇದೆ.
    ಈ ಮೊದಲು ನಟಿ ರನ್ಯ ರಾವ್ ಗೆ ವಿಶೇಷ ನ್ಯಾಯಾಲಯ ಜಾಮೀನು ನೀಡಿತ್ತು. ಆದರೆ, ಆದರೆ ರನ್ಯಾ ರಾವ್ ಜೈಲಿನಿಂದ ಬಿಡುಗಡೆ ಆಗಿಲ್ಲ. ಇದಕ್ಕೆ ಕಾರಣ ಅವರ ಮೇಲೆ ದಾಖಲಾದ ಕೇಸ್. ರನ್ಯಾ ವಿರುದ್ಧ ಕಠಿಣವಾದ ವಿದೇಶಿ ವಿನಿಮಯ ನಿಯಂತ್ರಣ ಮತ್ತು ಕಳ್ಳಸಾಗಣೆ ನಿಯಂತ್ರಣ ಕಾಯ್ದೆ COFEPOSA ಅಡಿಯಲ್ಲಿ ದೂರು ದಾಖಲಿಸಲಾಗಿದೆ. ಇದೊಂದು ಕಠಿಣವಾದ ಕಾಯ್ದೆಯಾಗಿದೆ. ಇದರ ಅಡಿಯಲ್ಲಿ ಕೇಸ್ ದಾಖಲಾದರೆ ಜಾಮೀನು ಸಿಗೋದಿಲ್ಲ. ಒಂದೊಮ್ಮೆ ಆರೋಪಿಗಳಿಗೆ ಬೇರೆ ಪ್ರಕರಣಗಳಲ್ಲಿ ಜಾಮೀನು ದೊರೆತರೂ ಸಹ ಅವರ ಬಿಡುಗಡೆ ಸಾಧ್ಯವಿಲ್ಲ. ಈ ಕಾರಣದಿಂದಲೇ ಅವರಿನ್ನೂ ಜೈಲಿನಲ್ಲಿ ಮುದ್ದೆ ಮುರಿಯುತ್ತಿದ್ದಾರೆ.

Recent Articles

spot_img

Related Stories

Share via
Copy link