ಶಿಕ್ಷಣ ಭೀಷ್ಮರ ಪುಣ್ಯಸ್ಮರಣೆ

ತುಮಕೂರು:


ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಸಂಸ್ಥಾಪಕರು ಹಾಗೂ ಶಿಕ್ಷಣ ಭೀಷ್ಮ ಡಾ.ಹೆಚ್.ಎಂ.ಗಂಗಾಧರಯ್ಯ ಅವರ 26ನೆ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮವು ಸಿದ್ಧಾರ್ಥ ನಗರದಲ್ಲಿ ನಡೆಯಿತು.

ಬೌದ್ಧ ಭಿಕ್ಖು ಮಹಾಸಂಘದ ಬಂತೇಜಿ ಮತ್ತು ಸಹಸದಸ್ಯರ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮದಲ್ಲಿ ದಿವಂಗತ ಡಾ.ಹೆಚ್.ಎಮ್.ಗಂಗಾಧರಯ್ಯನವರ 26ನೇ ವರ್ಷದ ಪುಣ್ಯಸ್ಮರಣೆಯನ್ನು ಬೌದ್ಧ ಬಿಕ್ಕುಗಳಿಂದ ತಿಸರಣ ಗಮನ ಮತ್ತು ಗ್ರಹಣ ಹಾಗೂ ಪುಣ್ಯಾನುಮೋದನಾ ಸ್ಮರಣೆ ಮತ್ತು ನುಡಿ ನಮನವನ್ನು ಸಲ್ಲಿಸಲಾಯಿತು.

ಡಾ.ಹೆಚ್.ಎಮ್.ಗಂಗಾಧರಯ್ಯ ಮತ್ತು ಗಂಗಾಮಾಳಮ್ಮ ಹಾಗೂ ಡಾ.ಜಿ.ಶಿವಪ್ರಸಾದ್ ಅವರ ಸಮಾಧಿಗೆ ಪುಷ್ಪಮಾಲೆ ಸಲ್ಲಿಸುವ ಮೂಲಕ ಧಾರ್ಮಿಕ ಕೈಂಕರ್ಯಗಳನ್ನು ಶ್ರೀ ಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ.ಜಿ.ಪರಮೇಶ್ವರ ಹಾಗೂ ಕನ್ನಿಕಾ ಪರಮೇಶ್ವರ ಮತ್ತು ಡಾ.ಆನಂದ್ ಅವರು ಬೌದ್ಧ ಸಂಪ್ರಾದಾಯದ ವಿಧಿ ವಿಧಾನಗಳನ್ನು ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಸಾಹೇ ವಿಶ್ವವಿದ್ಯಾಲಯದ ಸಿಬ್ಬಂದಿ, ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರ, ಶ್ರೀ ಸಿದ್ಧಾರ್ಥ ಎಂಜಿನಿಯರಿಂಗ್ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿ ಸೇರಿದಂತೆ ಅಧ್ಯಾಪಕರು, ಪ್ರಾಥಮಿಕ ಮತ್ತು ಫ್ರೌಢಶಾಲಾ ಶಿಕ್ಷಕರು ಮತ್ತಿತರರು ಭಾಗವಹಿಸಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link