ನೀತಿ ಸಂಹಿತೆ ಉಲ್ಲಂಘನೆಯಾದರೆ ಕಠಿಣ ಕ್ರಮ : ಮುದ್ರಕರಿಗೆ ಆಯೋಗದ ಎಚ್ಚರಿಕೆ

ಬೆಂಗಳೂರು

    ರಾಜ್ಯ ಚುನಾವಣಾ ಆಯೋಗ ಚುನಾವಣೆಗೆ ವೇಳಾಪಟ್ಟಿಯನ್ನು ಘೋಷಣೆ ಮಾಡಿದ ದಿನದಿಂದಲೇ ಶಾಂತಿಯುತ ಮತ್ತು ಪಾರದರ್ಶಕವಾದ ಚುನಾವಣೆಗಾಗಿ ಹರ ಸಾಹಸ ಪಡುತ್ತಿದೆ .ಈ ಗುರಿ ಸಾಧನೆಗಾಗಿ ಚುನಾವಣಾ ನೀತಿ ಸಂಹಿತೆ ಎಂಬ ಬ್ರಹ್ಮಾಸ್ತ್ರವನ್ನು ಹೂಡಿದ್ದು ಅದು ತನ್ನ ಕೆಲಸವನ್ನು ಶುರು ಮಾಡಿದೆ.

     ಇದರ ವ್ಯಾಪ್ತಿ ಏನು ಎಂದು ನೋಡಿದರೆ ಇದು ಸಮುದ್ರದಲ್ಲಿನ ಆಕ್ಟೋಪಸ್‌ ರೀತಿ ಎಲ್ಲಾ ದಿಕ್ಕಿನಿಂದಲೂ ಕೆಲಸ ಮಾಡುತ್ತಿರುತ್ತದೆ ಅಂದರೆ ಚುನಾವಣಾ ಆಮಿಷ , ಅಕ್ರಮ , ವೆಚ್ಚದ ಮೇಲಿನ ಹದ್ದಿನ ಕಣ್ಣು ಮುಂತಾದ ಆಯಾಮಗಳು ಇದಕ್ಕಿವೆ ,ಇನ್ನು ಸುಲಭವಾಗಿ ಹೇಳ ಬೇಕೆಂದರೆ ಯಾರಾದರು ಚುನಾವಣೆ ಪ್ರಚಾರದ ಸಮಯದಲ್ಲಿ ಹಂಚಲು ತರುವ ಸೀರೆ , ಹಣ ,ಹೆಂಡ ಇನ್ನೂ ಮುಂತಾದ ಆಮಿಷಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಉಪಯುಕ್ತವಾಗಿದೆ. 

     ರಾಜ್ಯದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ. ಚುನಾವಣಾಧಿಕಾರಿಗಳು ಕರ ಪತ್ರ, ಬ್ಯಾನರ್, ಪೋಸ್ಟರ್ ಮುದ್ರಿಸುವ ಪ್ರಿಂಟಿಂಗ್ ಪ್ರೆಸ್ ಮಾಲೀಕರಿಗೆ ಹಲವು ಸೂಚನೆಗಳನ್ನು ನೀಡಿದ್ದಾರೆ. ನಿಯಮ ಉಲ್ಲಂಘನೆ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

    ಚುನಾವಣಾ ಸಮಯದಲ್ಲಿ ಪ್ರಿಂಟಿಂಗ್ ಪ್ರೆಸ್ ಮಾಲೀಕರು ಬ್ಯುಸಿ ಇರುತ್ತಾರೆ. ರಾಜಕೀಯ ಪಕ್ಷಗಳ, ಸ್ವತಂತ್ರ ಅಭ್ಯರ್ಥಿಗಳು ಕರಪತ್ರ, ಬ್ಯಾನರ್, ಪೋಸ್ಟರ್ ಮುದ್ರಣ ಮಾಡುತ್ತಾರೆ. ಆದ್ದರಿಂದ ಜಿಲ್ಲಾ ಚುನಾವಣಾಧಿಕಾರಿಗಳು ಪ್ರಿಂಟಿಂಗ್ ಪ್ರೆಸ್ ಮಾಲೀಕರ ಜೊತೆ ಸಭೆ ನಡೆಸುತ್ತಿದ್ದಾರೆ. ಮಾಲೀಕರು ಯಾವ ನಿಯಮಗಳನ್ನು ಪಾಲನೆ ಮಾಡಬೇಕು ಎಂದು ಸೂಚನೆಯನ್ನು ನೀಡುತ್ತಿದ್ದಾರೆ.

   ರಾಜ್ಯದಲ್ಲಿ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ, ರಾಜಕೀಯ ಪಕ್ಷಗಳ ಮತ್ತು ರಾಜಕೀಯ ಅಭ್ಯರ್ಥಿಗಳ ಕರಪತ್ರ, ಪೋಸ್ಟರ್ ಮತ್ತು ಬ್ಯಾನರ್‌ ಅನ್ನು ಮುದ್ರಿಸುವ ಮೊದಲು ಆಯಾ ವಿಧಾನಸಭಾ ಮತಕ್ಷೇತ್ರಗಳ ಚುನಾವಣಾಧಿಕಾರಿ (ಆರ್‌ಓ) ಅವರ ಅನುಮತಿ ಪಡೆಯುವುದು ಕಡ್ಡಾಯವಾಗಿದೆ.

    ಯಾವುದೇ ರೀತಿಯ ಅಪಪ್ರಚಾರ, ಸುಳ್ಳು ಮಾಹಿತಿಯ, ಕೋಮುಗಲಭೆ ಸೃಷ್ಟಿಸುವಂತಹ ಕರಪತ್ರ, ಪೋಸ್ಟರ್ ಮತ್ತು ಬ್ಯಾನರ್‌ಗಳನ್ನು ಮುದ್ರಿಸಲು ಅವಕಾಶವಿರುವುದಿಲ್ಲ. ಮುದ್ರಕರು ಪಾಂಪ್ಲೆಟ್‌ಗಳು ಮತ್ತು ಪೋಸ್ಟರ್‌ಗಳನ್ನು ಮುದ್ರಿಸುವ ಮೊದಲು ಪ್ರಕಾಶಕರ ಗುರುತಿನ ಬಗ್ಗೆ ದೃಢೀಕರಣವನ್ನು ಇಬ್ಬರು ಅನುಮೋದಕರೊಂದಿಗೆ ಪಡೆದಿರಲೇಬೇಕು. ಗುರುತಿನ ದೃಢೀಕರಣವಿಲ್ಲದೇ ಮುದ್ರಣ ಮಾಡುವಂತಿಲ್ಲ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap