ಲೋಕಾಯುಕ್ತ ದಾಳಿ : ಕಾರ್ಮಿಕ ಇಲಾಖೆ ನಿರೀಕ್ಷಕ ಪರಾರಿ

ಚಾಮರಾಜನಗರ

      ಹನೂರು ತಾಲೂಕಿನ ರಾಮಾಪುರ ಗ್ರಾಮದ ಕಬ್ಬಿಣದ ಅಂಗಡಿ ವ್ಯಾಪಾರಿ ಲಕ್ಷ್ಮಣ್ ಇಲಾಖೆಯಿಂದ ಅನುಮತಿ ಪಡೆಯಲು ಅರ್ಜಿ ಹಾಕಿದ ವೇಳೆ ಕಾರ್ಮಿಕ ಇಲಾಖೆಯ ನಿರೀಕ್ಷಕ ಚಂದ್ರು 5 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಇದರಲ್ಲಿ ಒಂದು ಸಾವಿರ ರೂಪಾಯಿ ಅಡ್ವಾನ್ಸ್ ಪಡೆದದ್ದರು ಎನ್ನಲಾಗಿದೆ.

      ಅದೇ ಗ್ರಾಮದ ಪೈಪ್ ಮತ್ತು ಇನ್ನಿತರ ವ್ಯಾಪಾರಿ ದಗ್ಲರಾಮ್ ಕಾರ್ಮಿಕ ಇಲಾಖೆಯಿಂದ ಅನುಮತಿ ಪಡೆಯಲು ಹೋದ ವೇಳೆ 6 ಸಾವಿರ ರೂಪಾಯಿ ಲಂಚ ಕೇಳಿದ್ದು ಇದರಲ್ಲಿ 3 ರೂಪಾಯಿ ಸಾವಿರ ಮೊದಲೇ ಪಡೆದಿದ್ದರು ಎನ್ನಲಾಗಿದೆ.

    ಇಬ್ಬರು ವ್ಯಾಪಾರಿಗಳು ಅಧಿಕಾರಿಯ ಲಂಚದಾಹದಿಂದ ಬೇಸತ್ತು ಲೋಕಾಯುಕ್ತರಿಗೆ ದೂರು ನೀಡಿದ್ದರು ಎನ್ನಲಾಗಿದೆ. ದೂರು ಪಡೆದ ಲೋಕಾಯುಕ್ತರು ಶುಕ್ರವಾರ ಸಂಜೆ ಅಧಿಕಾರಿ ಚಂದ್ರು ವ್ಯಾಪಾರಿಗಳ ಬಳಿ ಹಣ ಇಡುವಂತೆ ಹೇಳಿದ್ದಾನೆ. ಲಂಚದ ಹಣ ಇಟ್ಟ ಬಳಿಕ ಚಂದ್ರು ಹೊರ ಹೋಗಿದ್ದು ಮಧ್ಯವರ್ತಿ ಸಾಗರ್ ಎಂಬಾತ ಫೈಲ್ ನಿಂದ ಹಣ ತೆಗೆದುಕೊಂಡಿದ್ದಾನೆ.

     ಈ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ಅಧಿಕಾರಿ ಚಂದ್ರ ಸ್ಥಳದಿಂದ ಪರಾರಿಯಾಗಿದ್ದಾನೆ. ಇನ್ನು ಲೋಕಾಯುಕ್ತ ಪೊಲೀಸರು ಮಧ್ಯವರ್ತಿ ಸಾಗರ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap