ವಿಶಾಖಪಟ್ಟಣಂ : ಆರು ಮಂದಿ ನಕ್ಸಲೀಯರು ಎನ್‌ಕೌಂಟರ್!!

ವಿಶಾಖಪಟ್ಟಣಂ : 

     ಅರಣ್ಯ ಪ್ರದೇಶದಲ್ಲಿ ಗ್ರೇಹೌಂಡ್ಸ್‌ ಸಿಬ್ಬಂದಿಯೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಬುಧವಾರ ಬೆಳಿಗ್ಗೆ 6 ಮಂದಿ ನಕ್ಸಲೀಯರು ಎನ್ ಕೌಂಟರ್ ನಲ್ಲಿ ಸಾವನ್ನಪ್ಪಿದ್ದಾರೆ.

      ವಿಶಾಖಪಟ್ಟಣಂ ಜಿಲ್ಲೆಯ ತೀಗಲಾಮೆಟ್ಟ ಅರಣ್ಯಪ್ರದೇಶದಲ್ಲಿ ಸಿಪಿಐ(ಮಾವೋವಾದಿ) ಮತ್ತು ಗ್ರೇಹೌಂಡ್ಸ್ ಪೊಲೀಸರ ನಡುವೆ ಗುಂಡಿನ ಚಕಮಕಿ ನಡೆದಿರುವುದಾಗಿ ವಿಶಾಖ ಗ್ರಾಮೀಣ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ(ಎಸ್ಪಿ) ಕೃಷ್ಣ ರಾವ್ ಅವರು ತಿಳಿಸಿದ್ದಾರೆ.

     ಕೊಯ್ಯೂರು ಮಂಡಲ್ ಕಾಡಿನಲ್ಲಿ ಮಾವೋವಾದಿಗಳ ಇರುವಿಕೆ ಕುರಿತು ನಿರ್ದಿಷ್ಟ ಮಾಹಿತಿ ಮೇರೆಗೆ ಗ್ರೇಹೌಂಡ್ಸ್‌ ಸಿಬ್ಬಂದಿ ಕೆಲವು ದಿನಗಳಿಂದ ಕೂಂಬಿಂಗ್ ನಡೆಸುತ್ತಿದ್ದರು. ಬುಧವಾರ ಬೆಳಿಗ್ಗೆ ಮಾಂಪಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಟೀಗಲಮೆಟ್ಟಾ ಬಳಿ ಗ್ರೇಹೌಂಡ್ಸ್ ಸಿಬ್ಬಂದಿಗೆ ಮಾವೋವಾದಿಗಳ ಗುಂಪು ಕಾಣಿಸಿದ್ದು, ಗುಂಡಿನ ಚಕಮಕಿ ನಡೆದಿದೆ.

      ಎನ್ ಕೌಂಟರ್ ನಲ್ಲಿ ಮಹಿಳೆ ಸೇರಿದಂತೆ ಆರು ಮಂದಿ ನಕ್ಸಲೀಯರ ಶವ ಪತ್ತೆಯಾಗಿದ್ದು, ಎ.ಕೆ.47, ಎಸ್ ಎಲ್ ಆರ್, ಒಂದು ಕಾರ್ಬೈನ್ ಮತ್ತು ಮೂರು 303 ರೈಫಲ್ಸ್ ಅನ್ನು ಘಟನಾ ಸ್ಥಳದಲ್ಲಿ ವಶಪಡಿಸಿಕೊಂಡಿರುವುದಾಗಿ ರಾವ್ ಈ ಸಂದರ್ಭದಲ್ಲಿ ಮಾಹಿತಿ ನೀಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap