ದೇವನಹಳ್ಳಿ:
ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ನ ಮಾಜಿ ಶಾಸಕ ವೆಂಕಟಸ್ವಾಮಿ (53) ಹೃದಯಾಘಾತದಿಂದ ನಿಧನರಾಗಿದ್ದಾರೆ.ವೆಂಕಟಸ್ವಾಮಿ ಅವರಿಗೆ ಕಳೆದ ಒಂದು ತಿಂಗಳಲ್ಲಿ ಮೂರು ಬಾರಿ ಎದೆ ನೋವು ಕಾಣಿಸಿಕೊಂಡಿತ್ತು. ಈ ಹಿನ್ನೆಲೆ ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಧ್ಯರಾತ್ರಿ 02:20ಕ್ಕೆ ಆಸ್ವತ್ರೆಯಲ್ಲಿ ಕೊನೆಯುಸಿರೆಳೆದರು. ಮಾಜಿ ಶಾಸಕ ವೆಂಕಟಸ್ವಾಮಿಯವರು ಇಬ್ಬರು ಮಕ್ಕಳು ಮತ್ತು ಪತ್ನಿಯನ್ನು ಅಗಲಿದ್ದಾರೆ. ಸ್ವಗ್ರಾಮ ಸಾದಹಳ್ಳಿಯ ಮನೆ ಬಳಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
![](https://prajapragathi.com/wp-content/uploads/2023/04/venkataswamy.jpg)